ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ : ಸಚಿವ ಆರ್. ಅಶೋಕ್ -Vishwanews24

ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ : ಸಚಿವ ಆರ್. ಅಶೋಕ್ -Vishwanews24

ಬೆಂಗಳೂರು: ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿಲ್ಲ. ಆರ್.ಎಸ್.ಎಸ್.ಗೂ ಬಿಜೆಪಿಯೂ ಯಾವುದೇ ಸಂಬಂಧವಿಲ್ಲ. ತಾವು ಸೇರಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ಸಂಘ ಪರಿವಾರದಿಂದಲೇ ಬಂದವರು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಬಿಜೆಪಿಯನ್ನು ಸಂಘ ಪರಿವಾರ ನಿಯಂತ್ರಿಸುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅಶೋಕ್, ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ನಿಜಕ್ಕೂ ಗೊಂದಲವಿರುವುದು ಕಾಂಗ್ರೆಸ್ ನಲ್ಲಿಯೇ. ಇದನ್ನು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯೇ ಹೇಳಿದ್ದಾರೆ. ಕಾಂಗ್ರೆಸ್ ತಟ್ಟೆಯಲ್ಲಿ ನೊಣ, ಹೆಗ್ಗಣ ಬಿದ್ದಿದ್ದರೂ ಅದನ್ನು ನೋಡದೇ ಬಿಜೆಪಿ ತಟ್ಟೆಯಲ್ಲಿ ಸೊಳ್ಳೆ ಬಿದ್ದಿರುವುದನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಲವ್ ಜಿಹಾದ್ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಂಡಿದ್ದು, ಇದರ ವಿರುದ್ಧ ಕಾನೂನು ಮಾಡಿಯೇ ಮಾಡುತ್ತೇವೆ. ಹೆಣ್ಣುಮಕ್ಕಳ ಮತಾಂತರ ತಡೆಯುತ್ತೇವೆ. ಲವ್ ಜಿಹಾದ್ ಭಾರತ ದೇಶದ ಸಂಸ್ಕೃತಿಗೆ ಮಾರಕ. ನೂರಕ್ಕೆ ನೂರು ಲವ್ ಜಿಹಾದ್ ನಿಷೇಧಿಸಿಯೇ ತೀರುತ್ತೇವೆ. ಅದರಂತೆ ಗೋಹತ್ಯೆ ನಿಷೇಧ ಕಾನೂನನ್ನು ಜಾರಿಗೊಳಿಸುವುದಾಗಿ ಅಶೋಕ್ ಹೇಳಿದರು.
Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

20 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

20 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago