Featured

ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸಿ : ಮಮತಾರವರ ಮನವಿಯನ್ನು ತಳ್ಳಿಹಾಕಿದ ಪ್ರತಿಪಕ್ಷಗಳು -Vishwanews24

ಕೋಲ್ಕತಾ,: ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮನವಿಯನ್ನು ಸಿಪಿಐ, ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಗುರುವಾರ ತಳ್ಳಿಹಾಕಿವೆ.

”ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳ ನೂರಾರು ಕಚೇರಿಗಳನ್ನು ಈಗಲೂ ತೃಣಮೂಲ ಕಾಂಗ್ರೆಸ್ ಆಕ್ರಮಿಸಿಕೊಂಡಿದೆ” ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸುಧಾಕರ ರೆಡ್ಡಿ ಹೇಳಿದ್ದಾರೆ. ”ಎಡಪಕ್ಷಗಳಿಗೆ ಸೇರಿದ ನೂರಕ್ಕೂ ಅಧಿಕ ಮಂದಿಯನ್ನು ಹತ್ಯೆಗೈಲಾಗಿದೆ. ಸಾವಿರಾರು ಮಂದಿಯನ್ನು ಅವರ ಗ್ರಾಮಗಳಿಂದ ಹೊರದಬ್ಬಲಾಗಿದೆ. ಈಗಲೂ ಆ ರೀತಿಯ ದಾಳಿಗಳು ನಡೆಯುತ್ತಲೇ ಇವೆ” ಎಂದವರು ಆರೋಪಿಸಿದ್ದಾರೆ.

ಮಮತಾ ಬ್ಯಾನರ್ಜಿಯವರು ಪ್ರತಿಪಕ್ಷಗಳನ್ನು ರಾಜಕೀಯ ವಿರೋಧಿಗಳ ಹಾಗೆ ಕಾಣದೆ, ಶತ್ರುಗಳೆಂಬಂತೆ ನೋಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಆಕೆ ನೀಡಿರುವ ಕೊಡುಗೆ ಅರ್ಥಹೀನವೆಂದು ಅವರು ಹೇಳಿದ್ದಾರೆ.

ಬಿಜೆಪಿಯ ವಿರುದ್ಧ ಹೋರಾಟ ನಡೆಸುವ ಬಗ್ಗೆ ನಿಜಕ್ಕೂ ಮಮತಾ ಅವರು ಗಂಭೀರವಾಗಿ ಯೋಚಿಸುತ್ತಿರುವರಾದರೆ ಅವರು ಆ ಬಗ್ಗೆ ನಮ್ಮ ಹಿರಿಯ ನಾಯಕತ್ವದ ಜೊತೆ ಮಾತನಾಡಲಿ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಹೇಳಿದ್ದಾರೆ. ”ಮಮತಾಜಿ ಅವರ ವೈಫಲ್ಯಗಳಿಂದಾಗಿಯೇ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಬೆಳೆಯುತ್ತಾ ಹೋಗುತ್ತಿದೆ” ಎಂದವರು ಹೇಳಿದ್ದಾರೆ.

ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕರೆ ನೀಡುವ ಹಕ್ಕನ್ನು ಕೂಡಾ ಮಮತಾ ಕಳೆದುಕೊಂಡಿದ್ದಾರೆ. ಫ್ಯಾಶಿಸಂ ವಿರುದ್ಧ ಹೋರಾಡುವಂತಹ ವಿಶ್ವಾಸಾರ್ಹತೆಯನ್ನು ಟಿಎಂಸಿ ಹೊಂದಿಲ್ಲವೆಂದು ಅವರು ಹೇಳಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago