ಕೋಲ್ಕತಾ,: ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮನವಿಯನ್ನು ಸಿಪಿಐ, ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಗುರುವಾರ ತಳ್ಳಿಹಾಕಿವೆ.
”ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳ ನೂರಾರು ಕಚೇರಿಗಳನ್ನು ಈಗಲೂ ತೃಣಮೂಲ ಕಾಂಗ್ರೆಸ್ ಆಕ್ರಮಿಸಿಕೊಂಡಿದೆ” ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸುಧಾಕರ ರೆಡ್ಡಿ ಹೇಳಿದ್ದಾರೆ. ”ಎಡಪಕ್ಷಗಳಿಗೆ ಸೇರಿದ ನೂರಕ್ಕೂ ಅಧಿಕ ಮಂದಿಯನ್ನು ಹತ್ಯೆಗೈಲಾಗಿದೆ. ಸಾವಿರಾರು ಮಂದಿಯನ್ನು ಅವರ ಗ್ರಾಮಗಳಿಂದ ಹೊರದಬ್ಬಲಾಗಿದೆ. ಈಗಲೂ ಆ ರೀತಿಯ ದಾಳಿಗಳು ನಡೆಯುತ್ತಲೇ ಇವೆ” ಎಂದವರು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ಪ್ರತಿಪಕ್ಷಗಳನ್ನು ರಾಜಕೀಯ ವಿರೋಧಿಗಳ ಹಾಗೆ ಕಾಣದೆ, ಶತ್ರುಗಳೆಂಬಂತೆ ನೋಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಆಕೆ ನೀಡಿರುವ ಕೊಡುಗೆ ಅರ್ಥಹೀನವೆಂದು ಅವರು ಹೇಳಿದ್ದಾರೆ.
ಬಿಜೆಪಿಯ ವಿರುದ್ಧ ಹೋರಾಟ ನಡೆಸುವ ಬಗ್ಗೆ ನಿಜಕ್ಕೂ ಮಮತಾ ಅವರು ಗಂಭೀರವಾಗಿ ಯೋಚಿಸುತ್ತಿರುವರಾದರೆ ಅವರು ಆ ಬಗ್ಗೆ ನಮ್ಮ ಹಿರಿಯ ನಾಯಕತ್ವದ ಜೊತೆ ಮಾತನಾಡಲಿ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಹೇಳಿದ್ದಾರೆ. ”ಮಮತಾಜಿ ಅವರ ವೈಫಲ್ಯಗಳಿಂದಾಗಿಯೇ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಬೆಳೆಯುತ್ತಾ ಹೋಗುತ್ತಿದೆ” ಎಂದವರು ಹೇಳಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕರೆ ನೀಡುವ ಹಕ್ಕನ್ನು ಕೂಡಾ ಮಮತಾ ಕಳೆದುಕೊಂಡಿದ್ದಾರೆ. ಫ್ಯಾಶಿಸಂ ವಿರುದ್ಧ ಹೋರಾಡುವಂತಹ ವಿಶ್ವಾಸಾರ್ಹತೆಯನ್ನು ಟಿಎಂಸಿ ಹೊಂದಿಲ್ಲವೆಂದು ಅವರು ಹೇಳಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…