ಕೋಲ್ಕತಾ,: ಬಿಜೆಪಿಯನ್ನು ಸೋಲಿಸಲು ತನ್ನೊಂದಿಗೆ ಕೈಜೋಡಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮನವಿಯನ್ನು ಸಿಪಿಐ, ಸಿಪಿಎಂ ಹಾಗೂ ಕಾಂಗ್ರೆಸ್ ಪಕ್ಷಗಳು ಗುರುವಾರ ತಳ್ಳಿಹಾಕಿವೆ.
”ಪಶ್ಚಿಮಬಂಗಾಳದಲ್ಲಿ ಎಡಪಕ್ಷಗಳ ನೂರಾರು ಕಚೇರಿಗಳನ್ನು ಈಗಲೂ ತೃಣಮೂಲ ಕಾಂಗ್ರೆಸ್ ಆಕ್ರಮಿಸಿಕೊಂಡಿದೆ” ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸುಧಾಕರ ರೆಡ್ಡಿ ಹೇಳಿದ್ದಾರೆ. ”ಎಡಪಕ್ಷಗಳಿಗೆ ಸೇರಿದ ನೂರಕ್ಕೂ ಅಧಿಕ ಮಂದಿಯನ್ನು ಹತ್ಯೆಗೈಲಾಗಿದೆ. ಸಾವಿರಾರು ಮಂದಿಯನ್ನು ಅವರ ಗ್ರಾಮಗಳಿಂದ ಹೊರದಬ್ಬಲಾಗಿದೆ. ಈಗಲೂ ಆ ರೀತಿಯ ದಾಳಿಗಳು ನಡೆಯುತ್ತಲೇ ಇವೆ” ಎಂದವರು ಆರೋಪಿಸಿದ್ದಾರೆ.
ಮಮತಾ ಬ್ಯಾನರ್ಜಿಯವರು ಪ್ರತಿಪಕ್ಷಗಳನ್ನು ರಾಜಕೀಯ ವಿರೋಧಿಗಳ ಹಾಗೆ ಕಾಣದೆ, ಶತ್ರುಗಳೆಂಬಂತೆ ನೋಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಆಕೆ ನೀಡಿರುವ ಕೊಡುಗೆ ಅರ್ಥಹೀನವೆಂದು ಅವರು ಹೇಳಿದ್ದಾರೆ.
ಬಿಜೆಪಿಯ ವಿರುದ್ಧ ಹೋರಾಟ ನಡೆಸುವ ಬಗ್ಗೆ ನಿಜಕ್ಕೂ ಮಮತಾ ಅವರು ಗಂಭೀರವಾಗಿ ಯೋಚಿಸುತ್ತಿರುವರಾದರೆ ಅವರು ಆ ಬಗ್ಗೆ ನಮ್ಮ ಹಿರಿಯ ನಾಯಕತ್ವದ ಜೊತೆ ಮಾತನಾಡಲಿ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಹೇಳಿದ್ದಾರೆ. ”ಮಮತಾಜಿ ಅವರ ವೈಫಲ್ಯಗಳಿಂದಾಗಿಯೇ ಪಶ್ಚಿಮಬಂಗಾಳದಲ್ಲಿ ಬಿಜೆಪಿ ಬೆಳೆಯುತ್ತಾ ಹೋಗುತ್ತಿದೆ” ಎಂದವರು ಹೇಳಿದ್ದಾರೆ.
ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕರೆ ನೀಡುವ ಹಕ್ಕನ್ನು ಕೂಡಾ ಮಮತಾ ಕಳೆದುಕೊಂಡಿದ್ದಾರೆ. ಫ್ಯಾಶಿಸಂ ವಿರುದ್ಧ ಹೋರಾಡುವಂತಹ ವಿಶ್ವಾಸಾರ್ಹತೆಯನ್ನು ಟಿಎಂಸಿ ಹೊಂದಿಲ್ಲವೆಂದು ಅವರು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…