Featured

ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ : ಎಚ್.ಡಿ ದೇವೇಗೌಡ – VIshwanews24

ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ : ಎಚ್.ಡಿ ದೇವೇಗೌಡ – Vishwanews24

ಕಲಬುರಗಿ: ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದರು.

ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ಜೆಡಿಎಸ್ ಪಕ್ಷಕ್ಕೆ ಇನ್ನೂ ಶಕ್ತಿ ತುಂಬಬೇಕು. 2023 ಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‍ನವರು ಜೆಡಿಎಸ್ ಪಕ್ಷವನ್ನ ಸಂಪೂರ್ಣ ನಾಶ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಕ್ಕೆ ಶಕ್ತಿ ಕಡಿಮೆ ಇದೆ. ಕಾಂಗ್ರೆಸ್ ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿ ಇದೆ. 5 ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಎಷ್ಟು ಬೆಳೆಯುತ್ತೆ ಅನ್ನೋದು ಹೇಳೋಕೆ ಆಗುವುದಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರೀಯ ಪಕ್ಷ ಕಾಂಗ್ರೆಸ್, ಈಗ ಯಾವ ರಾಜ್ಯದಲ್ಲಿಯೂ ಇಲ್ಲ. ಇದಕ್ಕೆ ಕಾರಣ ಯಾರು ಅಂತಾ ಅವರೇ ಹುಡುಕಬೇಕು ಎಂದು ವ್ಯಂಗ್ಯವಾಡಿದರು.

ಇವತ್ತು ಬಿಜೆಪಿಯನ್ನ ಬಿಜೆಪಿ ಅಂತಾ ಕರೆಯಬೇಕಾ ಅಥವಾ ಮೋದಿ ಪಕ್ಷ ಅಂತಾ ಕರೆಯಬೇಕಾ ಗೊತ್ತಿಲ್ಲ. ಯಾಕೆಂದರೆ ಬಿಜೆಪಿ ಪಕ್ಷದಲ್ಲಿದ್ದವರು ಮೋದಿ ಹೆಸರಿನಲ್ಲೇ ಚುನಾವಣೆ ಮಾಡುತ್ತಿದ್ದಾರೆ. ಅದಕ್ಕಾಗಿ ನಾನು ಮೋದಿ ಪಾರ್ಟಿ ಅಂತಾ ಕರೆಯುತ್ತೇನೆ. ಒಬ್ಬ ವ್ಯಕ್ತಿಯ ಸಕ್ಸಸ್ ನಲ್ಲಿ ಪಾರ್ಟಿ ನಡೆಯುತ್ತಿದೆ. ಆದರೆ ಮುಂದೇನು ಆಗುತ್ತೋ ಅದು ನನಗೆ ಗೊತ್ತಿಲ್ಲ ಎಂದು ಟಾಂಗ್ ನೀಡಿದರು.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

1 day ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

1 day ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

1 day ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

1 day ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

1 day ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

1 day ago