Featured

ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ ,  ಅದನ್ನು ಸರಿ ಮಾಡಿಕೊಳ್ಳಲು ಪ್ರತಿಭಟನೆ : ಡಿಕೆಶಿ ವ್ಯಂಗ್ಯ – vishwanews24

ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ ,  ಅದನ್ನು ಸರಿ ಮಾಡಿಕೊಳ್ಳಲು ಪ್ರತಿಭಟನೆ : ಡಿಕೆಶಿ ವ್ಯಂಗ್ಯ

ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಸಮಸ್ಯೆಯಿದೆ. ಅದನ್ನು ಸರಿ ಮಾಡಿಕೊಳ್ಳಲು ಈಗ ಮತ್ತೊಮ್ಮೆ ಪ್ರತಿಭಟನೆ ನಡೆಸುತ್ತಿದ್ದು ಅವರ ಪ್ರತಿಭಟನೆಯಲ್ಲಿ ಯಾವುದೇ ಹುರುಳಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮ ಎಂದು ಮೈಸೂರು ಚಲೋ ಮಾಡಿದರು. ಅದಕ್ಕೆ ಈಗಾಗಲೇ ನಾವು ಉತ್ತರ ಕೊಟ್ಟಿದ್ದೇವೆ. ಈಗ ಪ್ರತಿಭಟನೆ ಮಾಡುವವರನ್ನು ಬೇಡ ಎನ್ನಲು ಆಗುತ್ತದೆಯೇ? ಬೇಡ ಎಂದು ಹೇಳಿದವರು ಯಾರು? ಎಂದು ಕುಟುಕಿದರು.

ತುಂಗಭದ್ರಾ ಅಣೆಕಟ್ಟಿನ ಗೇಟ್ ಅನ್ನು ಕಾರ್ಮಿಕರ, ಇಂಜಿನಿಯರ್ ಗಳ, ಅಧಿಕಾರಿಗಳ ಶ್ರಮದಿಂದ ದುರಸ್ತಿ ಮಾಡಲಾಗಿದೆ. ಅಣೆಕಟ್ಟು ತುಂಬಿದ ತಕ್ಷಣ ನಾನು ಮತ್ತು ಮುಖ್ಯಮಂತ್ರಿಗಳು ಬಾಗಿನ ಅರ್ಪಿಸುವ ಕೆಲಸ ಮಾಡುತ್ತೇವೆ. ದುರಸ್ತಿ ಕಾರ್ಯದಲ್ಲಿ ತೊಡಗಿಕೊಂಡ ಪ್ರತಿಯೊಬ್ಬ ಕಾರ್ಮಿಕರನ್ನು ಗೌರವಿಸುವ ಕೆಲಸ ಸರ್ಕಾರ ಮಾಡಲಿದೆ. ಇಡೀ ದೇಶವೇ ಏನಾಗಬಹುದು ಎಂದು ಕಾತರದಿಂದ ನೋಡುತ್ತಿತ್ತು. ನಾವು ಇದರಲ್ಲಿ ಯಶಸ್ಸು ಕಂಡಿದ್ದೇವೆ. ವಿರೋಧ ಪಕ್ಷಗಳು ಈ ವಿಷಯದ ಬಗ್ಗೆ ಟೀಕೆ ಮಾಡುತ್ತಿದ್ದವು. ಆಗ ನಾವೇನು ಮಾತನಾಡಲಿಲ್ಲ ಎಮದು ತಿಳಿಸಿದರು.

ನಾವು ಕೆಲಸ ಮಾಡಿ ಸಾಧಿಸಿದ್ದೇವೆ. ಟೀಕೆಗಳು ಸಾಯುತ್ತವೆ. ಅದಕ್ಕೆ ಕೆಲಸಗಳು ಉಳಿಯುತ್ತವೆ. ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಎಂದು ತಾಂತ್ರಿಕ ಸಮಿತಿ ರಚನೆ ಮಾಡಿದ್ದೇವೆ. ಅವರು ಎಲ್ಲಾ ಅಣೆಕಟ್ಟುಗಳ ಸುರಕ್ಷತ ವರದಿಯನ್ನು ನೀಡಲಿದ್ದಾರೆ ಎಂದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago