ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಬಿಜೆಪಿ- ಆರೆಸ್ಸೆಸ್ ಮಧ್ಯೆ ತಿಕ್ಕಾಟ ಆರಂಭಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದರು.
ಸಿಎಂ ಅಧಿಕಾರ ವಹಿಸಿದ ಒಂದು ತಿಂಗಳ ಬಳಿಕ ಸಚಿವ ಸಂಪುಟ ರಚನೆಯಾಗಿದೆ. ಈ ಹಿಂದೆ ಇಬ್ಬರು ಡಿಸಿಎಂ ಮಾಡಿದ್ದ ಬಿಜೆಪಿ, ಇದೀಗ ರಾಜ್ಯದ ಇತಿಹಾಸದಲ್ಲಿಪ್ರಥಮ ಬಾರಿ ತ್ರೀಡಿ ಡಿಸಿಎಂಗಳನ್ನು ಮಾಡಿ ನಗೆಪಾಟಲಿಗೀಡಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಸಚಿವ ಸಿ.ಟಿ.ರವಿ ರಾಜೀನಾಮೆಗೆ ಮುಂದಾಗುವ ಮೂಲಕ ಬಿಜೆಪಿ ಬಂಡವಾಳ ಬಯಲಾಗುತ್ತಿದೆ ಎಂದು ಐವನ್ ಹೇಳಿದರು. ಆರು ತಿಂಗಳ ತನಕ ಸಮಸ್ಯೆ ಇಲ್ಲಎಂದವರಿಗೆ ಭ್ರಮನಿರಸನವಾಗಿದೆ. ಅಧಿಕಾರ ಪಡೆದ ತಕ್ಷಣ ದ್ವೇಷದ ರಾಜಕೀಯ ಆರಂಭಿಸಿದ್ದು, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದರು.
ನಮ್ಮಲ್ಲಿಸಮ್ಮಿಶ್ರ ಸರಕಾರ ಮಾತ್ರ ಇತ್ತು. ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ. ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ವಪಕ್ಷದ ನಿಯೋಗವನ್ನಾದರೂ ಕೇಂದ್ರಕ್ಕೆ ಕೊಂಡೊಯ್ಯುವ ಕೆಲಸ ಸರಕಾರದಿಂದ ಆಗಲಿ ಎಂದು ಐವನ್ ಆಗ್ರಹಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…