ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಬಿಜೆಪಿ- ಆರೆಸ್ಸೆಸ್ ಮಧ್ಯೆ ತಿಕ್ಕಾಟ ಆರಂಭಗೊಂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆರೋಪಿಸಿದರು.
ಸಿಎಂ ಅಧಿಕಾರ ವಹಿಸಿದ ಒಂದು ತಿಂಗಳ ಬಳಿಕ ಸಚಿವ ಸಂಪುಟ ರಚನೆಯಾಗಿದೆ. ಈ ಹಿಂದೆ ಇಬ್ಬರು ಡಿಸಿಎಂ ಮಾಡಿದ್ದ ಬಿಜೆಪಿ, ಇದೀಗ ರಾಜ್ಯದ ಇತಿಹಾಸದಲ್ಲಿಪ್ರಥಮ ಬಾರಿ ತ್ರೀಡಿ ಡಿಸಿಎಂಗಳನ್ನು ಮಾಡಿ ನಗೆಪಾಟಲಿಗೀಡಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಸಚಿವ ಸಿ.ಟಿ.ರವಿ ರಾಜೀನಾಮೆಗೆ ಮುಂದಾಗುವ ಮೂಲಕ ಬಿಜೆಪಿ ಬಂಡವಾಳ ಬಯಲಾಗುತ್ತಿದೆ ಎಂದು ಐವನ್ ಹೇಳಿದರು. ಆರು ತಿಂಗಳ ತನಕ ಸಮಸ್ಯೆ ಇಲ್ಲಎಂದವರಿಗೆ ಭ್ರಮನಿರಸನವಾಗಿದೆ. ಅಧಿಕಾರ ಪಡೆದ ತಕ್ಷಣ ದ್ವೇಷದ ರಾಜಕೀಯ ಆರಂಭಿಸಿದ್ದು, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದರು.
ನಮ್ಮಲ್ಲಿಸಮ್ಮಿಶ್ರ ಸರಕಾರ ಮಾತ್ರ ಇತ್ತು. ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ. ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ವಪಕ್ಷದ ನಿಯೋಗವನ್ನಾದರೂ ಕೇಂದ್ರಕ್ಕೆ ಕೊಂಡೊಯ್ಯುವ ಕೆಲಸ ಸರಕಾರದಿಂದ ಆಗಲಿ ಎಂದು ಐವನ್ ಆಗ್ರಹಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…