Featured

ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ:  ಐವನ್‌ ಡಿಸೋಜ

ಮಂಗಳೂರು: ರಾಜ್ಯದ ಸಮ್ಮಿಶ್ರ ಸರಕಾರವನ್ನು ಅಭದ್ರಗೊಳಿಸಿ ಉತ್ತಮ ಆಡಳಿತ ನೀಡುತ್ತೇವೆ ಎಂದು ಅಧಿಕಾರಕ್ಕೆ ಬಂದ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಬಿಜೆಪಿ- ಆರೆಸ್ಸೆಸ್‌ ಮಧ್ಯೆ ತಿಕ್ಕಾಟ ಆರಂಭಗೊಂಡಿದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆರೋಪಿಸಿದರು.

ಸಿಎಂ ಅಧಿಕಾರ ವಹಿಸಿದ ಒಂದು ತಿಂಗಳ ಬಳಿಕ ಸಚಿವ ಸಂಪುಟ ರಚನೆಯಾಗಿದೆ. ಈ ಹಿಂದೆ ಇಬ್ಬರು ಡಿಸಿಎಂ ಮಾಡಿದ್ದ ಬಿಜೆಪಿ, ಇದೀಗ ರಾಜ್ಯದ ಇತಿಹಾಸದಲ್ಲಿಪ್ರಥಮ ಬಾರಿ ತ್ರೀಡಿ ಡಿಸಿಎಂಗಳನ್ನು ಮಾಡಿ ನಗೆಪಾಟಲಿಗೀಡಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ಸಚಿವ ಸಿ.ಟಿ.ರವಿ ರಾಜೀನಾಮೆಗೆ ಮುಂದಾಗುವ ಮೂಲಕ ಬಿಜೆಪಿ ಬಂಡವಾಳ ಬಯಲಾಗುತ್ತಿದೆ ಎಂದು ಐವನ್‌ ಹೇಳಿದರು.  ಆರು ತಿಂಗಳ ತನಕ ಸಮಸ್ಯೆ ಇಲ್ಲಎಂದವರಿಗೆ ಭ್ರಮನಿರಸನವಾಗಿದೆ. ಅಧಿಕಾರ ಪಡೆದ ತಕ್ಷಣ ದ್ವೇಷದ ರಾಜಕೀಯ ಆರಂಭಿಸಿದ್ದು, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್‌ ಮುಚ್ಚಲು ಹುನ್ನಾರ ನಡೆಸುತ್ತಿದೆ ಎಂದರು.

ನಮ್ಮಲ್ಲಿಸಮ್ಮಿಶ್ರ ಸರಕಾರ ಮಾತ್ರ ಇತ್ತು. ಬಿಜೆಪಿಯಲ್ಲಿ ತೃಪ್ತರು, ಅತೃಪ್ತರು, ಅನರ್ಹರ ಗುಂಪುಗಳಿವೆ. ಇಂಥವರಿಂದ ಉತ್ತಮ ಆಡಳಿತ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ವಪಕ್ಷದ ನಿಯೋಗವನ್ನಾದರೂ ಕೇಂದ್ರಕ್ಕೆ ಕೊಂಡೊಯ್ಯುವ ಕೆಲಸ ಸರಕಾರದಿಂದ ಆಗಲಿ ಎಂದು ಐವನ್‌ ಆಗ್ರಹಿಸಿದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago