ಬೆಂಗಳೂರು : “ಬಿಜೆಪಿ ಪಕ್ಷದಲ್ಲಿ ಎರಡು ಗುಂಪುಗಳಿದ್ದು, ಅವುಗಳ ನಡುವೆ ಎತ್ತಿಕಟ್ಟಿ ಮೂರನೆಯವರು ಲಾಭ ಮಾಡಿಕೊಳ್ಳುತ್ತಿದ್ದಾರೆ. ಫಂಡಿಂಗ್ಗಾಗಿ ಬಿಜೆಪಿಯವರೇ ಶಾಸಕರನ್ನು ಎತ್ತಿಕಟ್ಟಿ ಯಡಿಯೂರಪ್ಪ ಅವರನ್ನು ಬ್ಲಾಕ್ ಮೇಲ್ ಮಾಡಿ ವಸೂಲಿ ಮಾಡಿಕೊಳ್ಳುತ್ತಿದ್ದಾರೆ” ಎಂದು ದಿನೇಶ್ ಗುಂಡುರಾವ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಫಂಡಿಂಗ್ ಹಣ ತುಲುಪಿದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ನೀವೆ ಮುಂದುವರೆಯಿರಿ ಎಂದು ಹೈಕಮಾಂಡ್ ಹೇಳುತ್ತದೆ. ಬಿಜೆಪಿಯಲ್ಲಿನ ಗುಂಪುಗಾರಿಕೆ ಅಥವಾ ನಾಯಕತ್ವ ಬದಲಾವಣೆ ಚರ್ಚೆಗಳು ಫಂಡಿಗಾಗಿ ನಡೆಯುತ್ತಿರುವ ಬ್ಲಾಕ್ ಮೇಲ್ ತಂತ್ರಗಳಷ್ಟೆ” ಎಂದಿದ್ದಾರೆ.
ಇನ್ನು ಮೋದಿ ಸರ್ಕಾರ ಉದ್ಯಮಿಗಳ, ಶ್ರೀಮಂತರ ಹಿಡಿತಕ್ಕೆ ಸಿಲುಕಿದ್ದು, ಅವರು ಹೇಳಿದಂತೆ ಕೇಳುವ ಸ್ಥಿತಿಗೆ ತಲುಪಿದೆ, ಬಡವರ ಬಗ್ಗೆ ಯೋಚಿಸುವ ಹೃದಯವಂತಿಕೆ ಪ್ರಧಾನಿ ಅವರಿಗಿಲ್ಲವಾಗಿದೆ. ಶ್ರೀಮಂತರ ಆಸ್ತಿ ಶೇ.35ರಷ್ಟು ಹೆಚ್ಚಾಗಿದೆ. ರೈತರು, ಕಾರ್ಮಿಕರು, ಸೇವಾವಲಯದಲ್ಲಿರುವವರ ಆದಾಯ ತೀವ್ರವಾಗಿ ಕುಸಿದಿದೆ” ಎಂದು ಕಿಡಿಕಾರಿದ್ದಾರೆ.
ಸರ್ಕಾರವು ಕೊರೊನಾದಂತಹ ಸಮಯದಲ್ಲಿ ವಿದ್ಯುತ್ ದರ ಹೆಚ್ಚಳವನ್ನು ಮಾಡುತ್ತಿರುವುದು ಸರಿಯಲ್ಲ, ಲಾಕ್ಡೌನ್ನಿಂದ ಹೊರಗೆ ಓಡಾಡಲು ಸಾಧ್ಯವಿಲ್ಲ. ಮನೆಯಲ್ಲಿ ಕುಳಿತು ಟಿವಿ ನೋಡಿದರೂ ಹೆಚ್ಚುವರಿ ವಿದ್ಯುತ್ ಬಿಲ್ ಕಟ್ಟಬೇಕು ಎಂಬ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ದರ ಹೆಚ್ಚಳವನ್ನು ಕೈ ಬಿಡಬೇಕು” ಎಂದು ಒತ್ತಾಯಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…