ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಕಾರ್ಯಕರ್ತರು ನಾವೆಲ್ಲ ಒಟ್ಟಿಗಿದ್ದೇವೆ : ಅರುಣ್ ಸಿಂಗ್ -Vishwanews24
ಬಿಜೆಪಿಯಲ್ಲಿ ಯಾವುದೇ ಗೊಂದಲವಿಲ್ಲ. ಕಾರ್ಯಕರ್ತರು ನಾವೆಲ್ಲ ಒಟ್ಟಿಗಿದ್ದೇವೆ : ಅರುಣ್ ಸಿಂಗ್ -Vishwanews24
ಬೆಂಗಳೂರು: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಕಾರ್ಯಕರ್ತರು ನಾವೆಲ್ಲ ಒಟ್ಟಿಗಿದ್ದೇವೆ. ಒಟ್ಟಾಗಿ ಸರ್ಕಾರವನ್ನು ಮುನ್ನಡೆಸುತ್ತೇವೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಸಿಎಂ ಬದಲಾವಣೆ ವಿಚಾರ ಇಲ್ಲ. ಕಾಂಗ್ರೆಸ್ ಸುಮ್ಮನೆ ಆರೋಪ ಮಾಡುತ್ತಿದೆ. ಜೆಡಿಎಸ್ ಕ್ವಾರಂಟೀನ್ನಲ್ಲಿದೆ. ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ” ಎಂದರು.
ಮೂರು ದಿನ ಪಕ್ಷದ ಕಾರ್ಯಕ್ರಮ ಇದೆ. ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡುತ್ತೇವೆ. ಪಕ್ಷದ ಹಲವು ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಯಲಿದೆ. ಮುಖ್ಯಮಂತ್ರಿ, ಸಚಿವರು ಎಲ್ಲರೂ ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
