ಬೆಂಗಳೂರು: ಬಿಜೆಪಿಯವರಿಂದ ಕರ್ನಾಟಕ ರಾಜ್ಯ ಹಾಳಾಗ್ತಿದೆ ಅಂತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಕಿಡಿಕಾರಿದ್ದಾರೆ.
ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂಥೆ ಮಹಾ ಸಿಎಂ ಹೇಳಿರುವ ಹೇಳಿಕೆಯನ್ನು ಖಂಡಿಸಿರುವ ಅವರು . ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಅಂತ ಹೇಳಿದರು. ಇದೇ ವೇಳೆ ಅವರು ನಾವು ಯಾವುದೇ ಕಾರಣಕ್ಕೂ ಬೆಳಗಾವಿ ಬಿಟ್ಟುಕೊಡಲ್ಲ ಗಡಿ ವಿಚಾರದಲ್ಲಿ ಸಿಎಂ ಬಿಎಸ್ವೈ ನೀಚ ಕೆಲಸ ಮಾಡುತ್ತಿದ್ದಾರೆ ಅಂತ ಸಿಎಂ ವಿರುದ್ದ ಕಿಡಿಕಾರಿದರು.
ಸೊಲ್ಲಾಪುರ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಮುಂಬೈನ ಅರ್ಧ ಭಾಗ ಕರ್ನಾಟಕ ರಾಜ್ಯಕ್ಕೆ ಸೇರಬೇಕು. ಇದರ ಬಗ್ಗೆ ಮೊದಲು ತೀರ್ಮಾನ ಮಾಡಲಿ ಎಂದು ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಬೆಳಗಾವಿ ಜಿಲ್ಲೆ ರಾಜಕಾರಣಿಗಳು ಮರಾಠ ಏಜೆಂಟ್ಗಳು. ನಿನ್ನೆ ಸಮಾವೇಶದಲ್ಲಿ ಅಮಿತ್ ಶಾ ಮರಾಠ ಪೇಟ ಕಟ್ಟಿದ್ದರು. ಒಬ್ಬರಾದ್ರೂ ಈ ಬಗ್ಗೆ ಮಾತಾಡಿದ್ರಾ ಎಂದು ವಾಟಾಳ್ ನಾಗರಾಜ್ ಆಕ್ರೋಶ ಹೊರಹಾಕಿದರು.
ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ನಿಗಮ ಮಾಡುತ್ತಾರೆ. ಆದ್ರೆ ಮಹಾರಾಷ್ಟ್ರದವರು ಬೆಳಗಾವಿ ಬೇಕು ಅಂತಾರೆ. ಸಿಎಂ ಯಡಿಯೂರಪ್ಪ ಬಹಳ ನೀಚ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಸಿಎಂ ಸಚಿವ ಸಂಪುಟ ಸಭೆಯನ್ನು ಕರೆಯಬೇಕು. ಈ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…