ಕಲಬುರಗಿ: ರಾಜ್ಯ ಬಿಜೆಪಿ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಕುರಿತು ಪ್ರಜಾವಾಣಿ ಸರಣಿ ವರದಿಗಳನ್ನು ಪ್ರಕಟಿಸುತ್ತಿದ್ದು, ಭ್ರಷ್ಟಾಚಾರದಲ್ಲಿ ನಂಬರ್ ಒನ್ ಆಗಿರುವ ರಾಜ್ಯ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬಹುಮಾನ ನೀಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುಟುಕಿದರು.
ನಗರದಲ್ಲಿ ಪಕ್ಷದ ಡಿಜಿಟಲ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡ ರೈತರ ಹೊಲಗಳಿಗೆ ಬೋರ್ ವೆಲ್ ಕೊರೆಸುವ ಗಂಗಾ ಕಲ್ಯಾಣ ಯೋಜನೆಯಲ್ಲಿಯೂ ಭಾರಿ ಭ್ರಷ್ಟಾಚಾರ ನಡೆದಿದ್ದು, ಪಕ್ಷವು ರಾಜ್ಯ ಸರ್ಕಾರದ ಭ್ರಷ್ಟಾಚಾರದ ದಾಖಲೆಗಳನ್ನು ಶೀಘ್ರ ಬಿಡುಗಡೆ ಮಾಡಲಿದೆ ಎಂದರು.
ಭಗವದ್ಗೀತೆ ಅಳವಡಿಸಿದ್ದೇ ನಾವು: ರಾಜ್ಯ ಸರ್ಕಾರ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಬಿಜೆಪಿಯವರಿಗಿಂತ ಮುಂಚೆಯೇ ನಾವು ಭಗವದ್ಗೀತೆಯಲ್ಲಿನ ಉತ್ತಮ ಅಂಶಗಳನ್ನು ಪಠ್ಯಪುಸ್ತಕದಲ್ಲಿ ಸೇರಿಸಿದ್ದೇವೆ. ರಾಜೀವ್ ಗಾಂಧಿ ಅವರು ಪ್ರಧಾನಿ ಆಗಿದ್ದಾಗ ದೂರದರ್ಶನದಲ್ಲಿ ರಾಮಾಯಣ ಧಾರಾವಾಹಿ ಪ್ರಸಾರ ಆರಂಭಿಸಿದರು. ಮುಖ್ಯಮಂತ್ರಿಯಾಗಿದ್ದ ಕೆಂಗಲ್ ಹನುಮಂತಯ್ಯ ಅವರು ₹ 2ಕ್ಕೆ ಒಂದರಂತೆ ಭಗವದ್ಗೀತೆಯ ಪ್ರತಿಗಳನ್ನು ಹಂಚಿದರು ಎಂದು ಹೇಳುತ್ತಾ ಭಗವದ್ಗೀತೆಯಲ್ಲಿ ಯದಾ ಯದಾಹಿ ಧರ್ಮಸ್ಯ.. ಶ್ಲೋಕವನ್ನು ಹೇಳಿದರು.
ಯಾರು ಏನೇ ಹೇಳಲಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೇವ ಗುತ್ತೇದಾರ, ವಿಧಾನಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ಇದ್ದರು.
ಮಲ್ಪೆ : ಕಡಲಿಗಿಳಿದ ಮೀನುಗಾರಿಕೆ ಬೋಟುಗಳು ಮಲ್ಪೆ: ಸಮುದ್ರ ಸಹಜ ಸ್ಥಿತಿಗೆ ಬಂದ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಮೀನುಗಾರ…
ಚಿಕ್ಕಮಗಳೂರು : ಭಾರೀ ಗಾಳಿಗೆ ಬೈಕ್ ಮೇಲೆ ಬಿದ್ದ ಮರ; ಸವಾರ ಕೂದಲೆಳೆ ಅಂತರದಲ್ಲಿ ಪಾರು ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ…
ಅಮಾನವೀಯ ಘಟನೆ : ತಂದೆಯ ಅಂತಿಮ ದರ್ಶನಕ್ಕೆ ಬರಲಾಗದೆ ವಿಡಿಯೋ ಕಾಲ್ ಮೂಲಕ ಅಂತ್ಯಸಂಸ್ಕಾರ ವೀಕ್ಷಿಸಿದ ಪುತ್ರಿಯರು ಸೋನಿಪತ್: ತಮ್ಮ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಎ-14 ಪ್ರದೋಷ್ನಿಂದ ಮಾಫಿ ಸಾಕ್ಷಿಗೆ ಅರ್ಜಿ ನಾನು ಸತ್ಯವನ್ನೇ ಹೇಳುತ್ತೇನೆ.. ಮಾಫಿ ಸಾಕ್ಷಿಯಾಗಿ ಪರಿಗಣಿಸಿ…
ಸುರತ್ಕಲ್: ಶಾಲೆಯಲ್ಲಿ ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು 10ನೇ ತರಗತಿ ವಿದ್ಯಾರ್ಥಿ ಸಾವು ಮಂಗಳೂರು: ಸುರತ್ಕಲ್ ಸಮೀಪದ ಕೋಟೆ…
ಮಂಗಳೂರು : ನ್ಯುಮೋನಿಯ ಜ್ವರದಿಂದ ವಿದ್ಯಾರ್ಥಿನಿ ಮೃತ್ಯು ಮಂಗಳೂರು: ಒಂದು ವಾರದಿಂದ ನ್ಯುಮೋನಿಯ ಜ್ವರದಿಂದ ಬಳಲುತ್ತಿದ್ದ ಕಂದಾವರದ ನಿವಾಸಿ, ವಿದ್ಯಾರ್ಥಿನಿ…