ಬೆಂಗಳೂರು; ರೆಬೆಲ್ ಶಾಸಕರನ್ನು ಅನರ್ಹತೆಗೊಳಿಸಿದ ಸ್ಪೀಕರ್ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ, ಮಾನ ಮರ್ಯಾದೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ..
ಸೋಮವಾರ ಬಿಜೆಪಿ ವಿಶ್ವಾಸಮತ ಯಾಚನೆ ಹಿನ್ನೆಲೆ ವಿಧಾನಸೌಧದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, “ಸ್ಪೀಕರ್ ಆದೇಶವನ್ನ ಬಿಜೆಪಿಯವರು ವಿರೋಧಿಸಿದ್ದಾರೆ. ಆದರೆ, ಅತೃಪ್ತ ಶಾಸಕರ ಮೇಲೆ ಅವರಿಗೆ ಯಾಕೆ ಇಷ್ಟು ಕಾಳಜಿ ಎಂದು ಅರ್ಥವಾಗುತ್ತಿಲ್ಲ. ಅಸಲಿಗೆ ಸ್ಪೀಕರ್ ತೀರ್ಪು ಪಕ್ಷಾಂತರ ಮಾಡುವವರಿಗೆ ಇದು ಶಾಸ್ತಿ. ಅವರ ತೀರ್ಪನ್ನು ಬಿಜೆಪಿ ನಾಯಕರು ಶ್ಲಾಘಿಸಬೇಕಿತ್ತು. ಅದನ್ನು ಬಿಟ್ಟು ತೀರ್ಪನ್ನು ವಿರೋಧಿಸುವುದು ಸರಿಯಲ್ಲ. ಅವರ ಅವಧಿಯಲ್ಲಿ ಸ್ಪೀಕರ್ ಕೆ.ಜಿ. ಬೋಪಯ್ಯ ಕಾನೂನು ಬಾಹೀರವಾದ ತೀರ್ಪು ನೀಡಿದ್ದರು. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಉಳಿದಿಲ್ಲ, ಅವ್ರಿಗೆ ಮಾನ ಮರ್ಯಾದೆಯೂ ಇಲ್ಲ” ಎಂದು ಕಿಡಿಕಾರಿದ್ದಾರೆ.
ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೆಸ್-ಜೆಡಿಎಸ್ನ ಎಲ್ಲ 17 ಶಾಸಕರು ಅನರ್ಹಗೊಳಿಸುವ ಮಹತ್ವದ ತೀರ್ಮಾನವನ್ನು ಸ್ಪೀಕರ್ ರಮೇಶ್ ಕುಮಾರ್ ಪ್ರಕಟಿಸಿದ್ದಾರೆ. ಕಳೆದ ಗುರುವಾರ ಮೂವರನ್ನು ಅನರ್ಹಗೊಳಿಸಿದ್ದ ಅವರು ಭಾನುವಾರ ಉಳಿದ 14 ಮಂದಿಯನ್ನು ಶಾಸಕತ್ವದಿಂದ ಮುಕ್ತಗೊಳಿಸಿದ್ದಾರೆ. ಇದರಿಂದಾಗಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವುದು ಸರಾಗವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್ ತೀರ್ಮಾನದಿಂದ ಬಂಡಾಯಗಾರರ ಭವಿಷ್ಯ ಡೋಲಾಯಮಾನವಾಗಿದ್ದರೂ ಬಿಜೆಪಿಗೆ ಇದು ವರದಾನವಾದಂತಾಗಿದೆ. ವಿಶ್ವಾಸಮತ ಸಾಬೀತಿನಲ್ಲಿ ಹೊಸ ಸರಕಾರ ಯಶಸ್ವಿಯಾದರೆ ಮುಂದಿನ 6 ತಿಂಗಳು ನಿರಾತಂಕವಾಗಲಿದೆ ಎನ್ನಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…