Featured

ಬಿಜೆಪಿಯವರಿಗೆ ಮಾನ ಮರ್ಯಾದೆಯೂ ಇಲ್ಲ : ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ -Vishwanews24

ಬೆಂಗಳೂರು; ರೆಬೆಲ್ ಶಾಸಕರನ್ನು ಅನರ್ಹತೆಗೊಳಿಸಿದ ಸ್ಪೀಕರ್ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ,  ಮಾನ ಮರ್ಯಾದೆಯೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ..

ಸೋಮವಾರ ಬಿಜೆಪಿ ವಿಶ್ವಾಸಮತ ಯಾಚನೆ ಹಿನ್ನೆಲೆ ವಿಧಾನಸೌಧದಲ್ಲಿ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, “ಸ್ಪೀಕರ್ ಆದೇಶವನ್ನ ಬಿಜೆಪಿಯವರು ವಿರೋಧಿಸಿದ್ದಾರೆ. ಆದರೆ, ಅತೃಪ್ತ ಶಾಸಕರ ಮೇಲೆ ಅವರಿಗೆ ಯಾಕೆ ಇಷ್ಟು ಕಾಳಜಿ ಎಂದು ಅರ್ಥವಾಗುತ್ತಿಲ್ಲ. ಅಸಲಿಗೆ ಸ್ಪೀಕರ್ ತೀರ್ಪು ಪಕ್ಷಾಂತರ ಮಾಡುವವರಿಗೆ ಇದು ಶಾಸ್ತಿ. ಅವರ ತೀರ್ಪನ್ನು ಬಿಜೆಪಿ ನಾಯಕರು ಶ್ಲಾಘಿಸಬೇಕಿತ್ತು. ಅದನ್ನು ಬಿಟ್ಟು ತೀರ್ಪನ್ನು ವಿರೋಧಿಸುವುದು ಸರಿಯಲ್ಲ. ಅವರ ಅವಧಿಯಲ್ಲಿ ಸ್ಪೀಕರ್ ಕೆ.ಜಿ. ಬೋಪಯ್ಯ ಕಾನೂನು ಬಾಹೀರವಾದ ತೀರ್ಪು ನೀಡಿದ್ದರು. ಹೀಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರ ತೀರ್ಪನ್ನು ವಿರೋಧಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಉಳಿದಿಲ್ಲ, ಅವ್ರಿಗೆ ಮಾನ ಮರ್ಯಾದೆಯೂ ಇಲ್ಲ” ಎಂದು ಕಿಡಿಕಾರಿದ್ದಾರೆ.

ಬಂಡಾಯದ ಬಾವುಟ ಹಾರಿಸಿದ್ದ ಕಾಂಗ್ರೆಸ್‌-ಜೆಡಿಎಸ್‌ನ ಎಲ್ಲ 17 ಶಾಸಕರು ಅನರ್ಹಗೊಳಿಸುವ ಮಹತ್ವದ ತೀರ್ಮಾನವನ್ನು ಸ್ಪೀಕರ್‌ ರಮೇಶ್‌ ಕುಮಾರ್‌ ಪ್ರಕಟಿಸಿದ್ದಾರೆ. ಕಳೆದ ಗುರುವಾರ ಮೂವರನ್ನು ಅನರ್ಹಗೊಳಿಸಿದ್ದ ಅವರು ಭಾನುವಾರ ಉಳಿದ 14 ಮಂದಿಯನ್ನು ಶಾಸಕತ್ವದಿಂದ ಮುಕ್ತಗೊಳಿಸಿದ್ದಾರೆ. ಇದರಿಂದಾಗಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಸರಕಾರಕ್ಕೆ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸುವುದು ಸರಾಗವಾಗಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಪೀಕರ್‌ ತೀರ್ಮಾನದಿಂದ ಬಂಡಾಯಗಾರರ ಭವಿಷ್ಯ ಡೋಲಾಯಮಾನವಾಗಿದ್ದರೂ ಬಿಜೆಪಿಗೆ ಇದು ವರದಾನವಾದಂತಾಗಿದೆ. ವಿಶ್ವಾಸಮತ ಸಾಬೀತಿನಲ್ಲಿ ಹೊಸ ಸರಕಾರ ಯಶಸ್ವಿಯಾದರೆ ಮುಂದಿನ 6 ತಿಂಗಳು ನಿರಾತಂಕವಾಗಲಿದೆ ಎನ್ನಲಾಗಿದೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

15 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

16 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

16 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

17 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

17 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

17 hours ago