Featured

ಬಿಜೆಪಿಯವರಿಗೆ ರಾಜಕೀಯಕ್ಕಾಗಿ ʼಧರ್ಮಸ್ಥಳʼ ಬೇಕಾಗಿದೆ : ಡಿ.ಕೆ.ಶಿವಕುಮಾರ್ – vishwanews24

ಬಿಜೆಪಿಯವರಿಗೆ ರಾಜಕೀಯಕ್ಕಾಗಿ ʼಧರ್ಮಸ್ಥಳʼ ಬೇಕಾಗಿದೆ..

ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ..

ಬಿಜೆಪಿಯವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ : ಡಿ.ಕೆ.ಶಿ ವಾಗ್ದಾಳಿ

ಬೆಂಗಳೂರು : “ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಬಿಜೆಪಿಯವರ ನಿಯೋಗ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, “ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬಂಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ” ಎಂದು ಟೀಕಿಸಿದರು.

“ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ? ಎಸ್ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು. ನ್ಯಾಯಾಲಯದ ಮುಂದೆ ದೂರು ನೀಡಿದ ನಂತರವೂ ಸರಕಾರ ತನಿಖೆ ಮಾಡದಿದ್ದರೇ ಬಿಜೆಪಿಯವರು ಏನು ಹೇಳುತ್ತಿದ್ದರು? ಅವರೇ ಟೀಕೆ ಮಾಡುತ್ತಿರಲಿಲ್ಲವೇ? ಈಗ ಈ ರೀತಿ ರಾಜಕಾರಣ ಮಾಡುತ್ತಿದ್ದು, ನಾವು ಇದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ತಿಳಿಸಿದರು.

ಮುಸುಕುಧಾರಿ ದೂರುದಾರನಿಗೆ ಮಂಪರು ಪರೀಕ್ಷೆ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಅವರು ಏನಾದರೂ ಆಗ್ರಹ ಮಾಡಲಿ, ಮಂಪರು ಪರೀಕ್ಷೆ ಅಥವಾ ಬೇರೆ ಯಾವುದೇ ತನಿಖೆಗೆ ಬೇಕಾದರೂ ಆಗ್ರಹಿಸಲಿ. ಅದು ತಪ್ಪಲ್ಲ. ಎಸ್ಐಟಿ ತನಿಖೆ ಸ್ವಾಗತಿಸಿದವರು ಇಂದು ಈ ರೀತಿ ಮಾತನಾಡುತ್ತಿದ್ದಾರೆ. ಎಷ್ಟು ಗುಂಡಿ ತೆಗೆಯಬೇಕು, ಬೇಡ ಎಂದು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ಅವರ ತನಿಖೆಯಲ್ಲಿ ನಾವೇಕೆ ಹಸ್ತಕ್ಷೇಪ ಮಾಡಬೇಕು?” ಎಂದು ಮರುಪ್ರಶ್ನಿಸಿದರು.

ನಿಮ್ಮ ಷಡ್ಯಂತ್ರ ಹೇಳಿಕೆಯನ್ನು ಬಿಜೆಪಿ ನಾಯಕರು ಸ್ವಾಗತ ಮಾಡಿದ್ದಾರೆ ಎಂದು ಕೇಳಿದಾಗ, “ನನಗೆ ವೈಯಕ್ತಿಕವಾಗಿ ಇರುವ ಅನುಭವದ ವಿಚಾರ ನಾನು ಹೇಳಿದ್ದೇನೆ. ಆದರೆ ಸರಕಾರಿ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲು ನನಗೆ ಇಷ್ಟವಿಲ್ಲ. ಬಿಜೆಪಿ ಶಾಸಕರು ಸದನದಲ್ಲಿ ಮಾತನಾಡಿರಬಹುದು. ಅದಕ್ಕೂ ಮುನ್ನ ನಮ್ಮ ಶಾಸಕರು ಶಾಸಕಾಂಗ ಸಭೆಯಲ್ಲೇ ಧರ್ಮಸ್ಥಳದ ಪರ ಧ್ವನಿ ಎತ್ತಿದ್ದಾರೆ. ಆ ಭಾಗದ ಕಾಂಗ್ರೆಸ್ ನಾಯಕರು ಆರಂಭದಲ್ಲೇ ಬಂದು ನಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಅಧಿಕಾರದಲ್ಲಿರುವ ಸರಕಾರ ಈ ವಿಚಾರವನ್ನು ಚರ್ಚಿಸಬಾರದು ಎಂದು ಮಾತನಾಡಿರಲಿಲ್ಲ. ನಮ್ಮ ಮುಖ್ಯಮಂತ್ರಿಗಳು ಕೂಡ ಯಾರಿಗೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಕಾನೂನು ಪ್ರಕಾರ ತನಿಖೆ ಆಗುತ್ತದೆ. ತಪ್ಪು ಸಂದೇಶ ನೀಡಿ, ಅಪಪ್ರಚಾರ ಮಾಡಿದ್ದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಇದಕ್ಕೆ ಕುಮ್ಮಕ್ಕು ನೀಡುತ್ತಿರುವವನು ಮುಖ್ಯಮಂತ್ರಿಗಳನ್ನೇ ಕೊಲೆಗಾರ ಎಂದಿದ್ದಾನೆ. ಆತನ ಬಗ್ಗೆ ನೀವು ವರದಿ ಮಾಡಿದ್ದೀರಾ? ಇದೆಲ್ಲದರ ಮಾಹಿತಿ ನಮ್ಮ ಬಳಿ ಇದೆ” ಎಂದು ಹೇಳಿದರು.

ಗುಂಡಿ ಅಗೆಯುವುದನ್ನು ನಿಲ್ಲಿಸುತ್ತೀರಾ ಎಂದು ಕೇಳಿದಾಗ, “ನಾನು ತನಿಖೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಯಾರು ತನಿಖೆ ಮಾಡುತ್ತಿದ್ದಾರೆ ಎಂದು ನನಗೆ ಗೊತ್ತಿಲ್ಲ. ಇದಕ್ಕೆಂದು ಗೃಹ ಸಚಿವರಿದ್ದು, ಅವರು ನಿಭಾಯಿಸುತ್ತಾರೆ. ಈ ಬಗ್ಗೆ ಅವರೇ ತೀರ್ಮಾನ ಮಾಡುತ್ತಾರೆ. ನಾವು ನಮ್ಮ ಮೂಲಗಳಿಂದ ಮಾಹಿತಿ ಸಂಗ್ರಹಿಸುತ್ತೇವೆ. ಅಲ್ಲಿ ನೂರಾರು ಜನ ಇರುತ್ತಾರೆ, ನಮಗೆ ಪೊಲೀಸರಿಂದಲೇ ಮಾಹಿತಿ ಬರಬೇಕು ಎಂದೇನಿಲ್ಲ” ಎಂದು ತಿಳಿಸಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

12 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

12 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

12 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

13 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

13 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

13 hours ago