ಬೆಂಗಳೂರು : ಬಿಜೆಪಿಯವರು ನಿಜವಾದ ಟೆರರಿಸ್ಟ್ಗಳು, ಸನಾತನ ಧರ್ಮದ ಹೆಸರಿನಲ್ಲಿ ಉಗ್ರವಾದ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ-ಆರ್ಎಸ್ಎಸ್ನವರು ಬಲಪಂಥೀಯ ಹೆಸರಿನಲ್ಲಿ ಉಗ್ರವಾದ ಮಾಡುವವರು. ಪ್ರಗತಿಪರ ಚಿಂತನೆ ಇಲ್ಲದವರು. ಗೌರಿ ಲಂಕೇಶ್ ಹತ್ಯೆಯ ಹಿಂದೆ ಯಾರಿದ್ದಾರೆ ಅಂತಾ ಗೊತ್ತಾಗಿದೆ ಎಂದರು.
ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ ಹತ್ಯೆ ಮಾಡಿದವರ ಬಗ್ಗೆ ನಮ್ಮ ಪೊಲೀಸರು ಎಳೆಎಳೆಯಾಗಿ ಬಿಚ್ಚಿಡ್ತಿದ್ದಾರೆ. ನಾಲ್ಕು ವರ್ಷಗಳಿಂದ ಕಂಡು ಹಿಡಿಯದಿದ್ದ ಕೇಸ್ ಬಗ್ಗೆ ಮಾಹಿತಿ ಈಗ ಸಿಕ್ಕಿದೆ. ಇದರ ಹಿಂದಿರುವವರು ಯಾರು ಅನ್ನೋದು ಜಗತ್ತಿಗೇ ಗೊತ್ತಾಗಿದೆ. ಗೌರಿ ಹಂತಕರನ್ನು ಹಿಡಿಯುವ ಕೆಲಸ ನಮ್ಮ ಸರ್ಕಾರ ಮಾಡಿತು. ಆದ್ರೆ ಮಹಾರಾಷ್ಟ್ರ ಸರ್ಕಾರ ಪನ್ಸಾರೆ ಮತ್ತು ದಾಬೋಲ್ಕರ್ ಕೊಲೆ ಮಾಡಿದವರ ಬಗ್ಗೆ ಚಕಾರ ಎತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಬಿಜೆಪಿಯವರೂ ಸಹ ಭಯೋತ್ಪಾದಕರಷ್ಟೇ ಕ್ರೂರ. ಅದೇ ಒಬ್ಬ ಮುಸ್ಲಿಂ ಇಂತಹ ಕೃತ್ಯ ಮಾಡಿದ್ರೆ ಸುಮ್ಮನೆ ಬಿಡುತ್ತಿದ್ರಾ? ಐಸಿಸ್ ಉಗ್ರ ಸಂಘಟನೆ ಪಾತ್ರ ಇದ್ದಿದ್ರೆ ಪ್ರತಿ ದಿನ ಚರ್ಚೆ ಆಗುತ್ತಿತ್ತು. ವಾಜಪೇಯಿ ಅಂತ್ಯ ಸಂಸ್ಕಾರಕ್ಕೆ ಹೋದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಯಾರೂ ಇವರ ವಿರುದ್ಧ ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡ್ತಾರೆ. ಇವರನ್ನು ಟೆರರಿಸ್ಟ್ ಅನ್ನದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ-ಆರ್ಎಸ್ಎಸ್ ವಿರುದ್ಧ ದಿನೇಶ್ ಗುಂಡುರಾವ್ ಗಂಭೀರ ಆರೋಪ ಮಾಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…