ಬೆಂಗಳೂರು : ಬಿಜೆಪಿಯವರು ನಿಜವಾದ ಟೆರರಿಸ್ಟ್ಗಳು, ಸನಾತನ ಧರ್ಮದ ಹೆಸರಿನಲ್ಲಿ ಉಗ್ರವಾದ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿ-ಆರ್ಎಸ್ಎಸ್ನವರು ಬಲಪಂಥೀಯ ಹೆಸರಿನಲ್ಲಿ ಉಗ್ರವಾದ ಮಾಡುವವರು. ಪ್ರಗತಿಪರ ಚಿಂತನೆ ಇಲ್ಲದವರು. ಗೌರಿ ಲಂಕೇಶ್ ಹತ್ಯೆಯ ಹಿಂದೆ ಯಾರಿದ್ದಾರೆ ಅಂತಾ ಗೊತ್ತಾಗಿದೆ ಎಂದರು.
ಗೌರಿ ಲಂಕೇಶ್, ದಾಬೋಲ್ಕರ್, ಪನ್ಸಾರೆ ಹತ್ಯೆ ಮಾಡಿದವರ ಬಗ್ಗೆ ನಮ್ಮ ಪೊಲೀಸರು ಎಳೆಎಳೆಯಾಗಿ ಬಿಚ್ಚಿಡ್ತಿದ್ದಾರೆ. ನಾಲ್ಕು ವರ್ಷಗಳಿಂದ ಕಂಡು ಹಿಡಿಯದಿದ್ದ ಕೇಸ್ ಬಗ್ಗೆ ಮಾಹಿತಿ ಈಗ ಸಿಕ್ಕಿದೆ. ಇದರ ಹಿಂದಿರುವವರು ಯಾರು ಅನ್ನೋದು ಜಗತ್ತಿಗೇ ಗೊತ್ತಾಗಿದೆ. ಗೌರಿ ಹಂತಕರನ್ನು ಹಿಡಿಯುವ ಕೆಲಸ ನಮ್ಮ ಸರ್ಕಾರ ಮಾಡಿತು. ಆದ್ರೆ ಮಹಾರಾಷ್ಟ್ರ ಸರ್ಕಾರ ಪನ್ಸಾರೆ ಮತ್ತು ದಾಬೋಲ್ಕರ್ ಕೊಲೆ ಮಾಡಿದವರ ಬಗ್ಗೆ ಚಕಾರ ಎತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.
ಬಿಜೆಪಿಯವರೂ ಸಹ ಭಯೋತ್ಪಾದಕರಷ್ಟೇ ಕ್ರೂರ. ಅದೇ ಒಬ್ಬ ಮುಸ್ಲಿಂ ಇಂತಹ ಕೃತ್ಯ ಮಾಡಿದ್ರೆ ಸುಮ್ಮನೆ ಬಿಡುತ್ತಿದ್ರಾ? ಐಸಿಸ್ ಉಗ್ರ ಸಂಘಟನೆ ಪಾತ್ರ ಇದ್ದಿದ್ರೆ ಪ್ರತಿ ದಿನ ಚರ್ಚೆ ಆಗುತ್ತಿತ್ತು. ವಾಜಪೇಯಿ ಅಂತ್ಯ ಸಂಸ್ಕಾರಕ್ಕೆ ಹೋದ ಸ್ವಾಮಿ ಅಗ್ನಿವೇಶ್ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಯಾರೂ ಇವರ ವಿರುದ್ಧ ಮಾತನಾಡುತ್ತಾರೋ ಅವರನ್ನು ಟಾರ್ಗೆಟ್ ಮಾಡ್ತಾರೆ. ಇವರನ್ನು ಟೆರರಿಸ್ಟ್ ಅನ್ನದೇ ಬೇರೆ ದಾರಿಯಿಲ್ಲ ಎಂದು ಬಿಜೆಪಿ-ಆರ್ಎಸ್ಎಸ್ ವಿರುದ್ಧ ದಿನೇಶ್ ಗುಂಡುರಾವ್ ಗಂಭೀರ ಆರೋಪ ಮಾಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…