Featured

ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ : ಡಿ.ಕೆ ಶಿ – vishwanews24

ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ : ಡಿ.ಕೆ ಶಿ

ಬೆಂಗಳೂರು: ಬಿಜೆಪಿಯವರು ಮಾಡಿದ್ದ ಷಡ್ಯಂತ್ರದ ವಿರುದ್ಧ ನನಗೆ ಜಯ ಸಿಕ್ಕಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಆಸ್ತಿ ಗಳಿಕೆ ಪ್ರಕರಣದ  ಸಂಬಂಧ ಸಿಬಿಐ (CBI) ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಈ ವೇಳೆ, ನಾವೆಲ್ಲಾ ಕಷ್ಟ ಪಟ್ಟು ಶ್ರಮ ಪಟ್ಟು ರಾಜಕಾರಣ ಮಾಡಿಕೊಂಡು ಬಂದಿದ್ದೇವೆ. ನಮ್ಮ ಮೇಲೆ ಬಿಜೆಪಿ ಸರ್ಕಾರ ಸಾಕಷ್ಟು ಷಡ್ಯಂತ್ರ ಮಾಡಿದೆ. ಸಾವಿರಾರು ಕೇಸ್ ದಾಖಲಿಸಿದೆ ಎಂದು ಆರೋಪಿಸಿದ್ದಾರೆ.

ನಾನು ಏನೂ ತಪ್ಪು ಮಾಡಿಲ್ಲ ಎಂದು ಅಂದೇ ಹೇಳಿದ್ದೆ. ಈಗ ನನಗೆ ಜಯ ಸಿಕ್ಕಿದೆ. ನನ್ನ ಪರವಾಗಿ ನಿಂತ ಸರ್ಕಾರಕ್ಕೆ, ನನ್ನ ಪರ ವಾದ ಮಾಡಿದ ವಕೀಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

ಸಿಬಿಐನವರೆ ಈ ಪ್ರಕರಣಕ್ಕೆ ಅಷ್ಟು ತಲೆಕೆಡಿಸಿಕೊಂಡಿಲ್ಲ. ಯತ್ನಾಳ್‍ಗೂ ಈ ಪ್ರಕರಣಕ್ಕೂ ಏನು ಸಂಬಂಧ? ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಹೋಗಲಿ. ಅವರಿಗೂ ನ್ಯಾಯಾಲಯ, ನಮಗೂ ನ್ಯಾಯಾಲಯ ಇದೆ. ನಾನು ಸಾಯೋವರೆಗೂ ಈ ರೀತಿ ಕೇಸ್‍ಗಳನ್ನ ಎದುರಿಸಲೇಬೇಕು. ಅದು ಗೊತ್ತಿದೆ ಅವರು ನನ್ನ ಬಿಡಲ್ಲ ಎಲ್ಲವನ್ನೂ ಎದುರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ನೀಡಿದ್ದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ಲೋಕಾಯುಕ್ತದಲ್ಲಿ ತನಿಖೆ ಮುಂದುವರೆಸಬಹುದು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ- ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್‍ನಲ್ಲಿ ಬಗೆಹರಿಯುವುದು ಸೂಕ್ತ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

2 days ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

2 days ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

2 days ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

2 days ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

2 days ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

2 days ago