ಕಲಬುರಗಿ :ಬಿಜೆಪಿಯವರು ಧರ್ಮ ಮತ್ತು ಮೋದಿಯ ಹೆಸರಲ್ಲಿ ಚುನಾವಣೆ ಗೆಲ್ಲುವ ಕನಸಲ್ಲಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡನ ಮೇಲೆ 40 ಕೇಸು ಹಾಕಿದ್ದು ಬಿಜೆಪಿ ಸರ್ಕಾರ. ಅವನನ್ನು ಬಿಜೆಪಿ ಸರ್ಕಾರವೇ ಗಡಿಪಾರು ಮಾಡಿದ್ದು. ಈಗ ಅವನನ್ನೇ ಬಿಜೆಪಿ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದರು.
ಇನ್ನು ಮೋದಿ ಫೋಟೋ ತೋರಿಸಿ, ಧರ್ಮದ ಆಧಾರದ ಮೇಲೆ ಪ್ರಚಾರ ಮಾಡಿ ಹಾಗೂ ಸ್ವಲ್ಪ ಹಣ ಖರ್ಚು ಮಾಡಿದರೆ ಯಾರೂ ಬೇಕಾದರೂ ಚಿತ್ತಾಪುರದಲ್ಲಿ ಚುನಾವಣೆ ಗೆಲ್ಲಬಹುದು ಎಂದು ಬಿಜೆಪಿಗರು ತಿಳಿದಂತಿದೆ. ಅಸಮರ್ಥ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ನೀವು ಕೇಂದ್ರ ಬಿಜೆಪಿಗರಿಗೆ ಸಂದೇಶ ರವಾನಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಅಕ್ರಮ ಅಕ್ಕಿ ಹಾಗೂ ಅಂಗನವಾಡಿಯಲ್ಲಿ ಮಕ್ಕಳಿಗೆ ಕೊಡುವ ಹಾಲಿನ ಪುಡಿಯನ್ನು ಕದ್ದು ಮಾಡಿ ಮಾರಾಟ ಮಾಡಿದಂತವರನ್ನು ನೀವು ಆಯ್ಕೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.
ನನಗೆ ಚಿತ್ತಾಪುರ ಕ್ಷೇತ್ರದ ಜನರ ಕುರಿತು ಕಾಳಜಿ ಇದೆ. ಕೊರೋನಾ ಸಂದರ್ಭದಲ್ಲಿ ದೊಡ್ಡಬಳ್ಳಾಪುರದಿಂದ ಬೆಡ್ ಖರೀದಿಸಿ ತಂದು ಇಲ್ಲಿನ ಜನರಿಗೆ ಒದಗಿಸಿದ್ದೇನೆ. ಅದಕ್ಕಾಗಿ ನನ್ನ ಮೇಲೆ ಕೇಸ್ ದಾಖಲಾಗಿದೆ. ಆದರೆ ಮಣಿಕಂಠನ ಮೇಲೆ ಅಕ್ರಮ ಅಕ್ಕಿ ಸಾಗಾಣಿಕೆ ಮಾಡಿದ್ದಕ್ಕೆ ಕೇಸು ದಾಖಲಾಗಿವೆ. ನಿಮಗೆ ಜನಪರ ಕೆಲಸ ಮಾಡುವ ನಾನು ಬೇಕೋ? ಅಕ್ರಮ ಕೆಲಸದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿ ಬೇಕಾ? ನಿರ್ಧರಿಸಿ ಎಂದಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…