ಕಲಬುರ್ಗಿ: ಸಿಬಿಐ ಅಧಿಕಾರಿಗಳು ನನ್ನ ಮಗಳ ನಿಶ್ಚಿತಾರ್ಥದಂದೆ ನನಗೆ ನೋಟಿಸ್ ನೀಡಿದ್ದು, ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ಮಿತಿಮೀರಿದೆ ಆದರೆ ನನಗೆ ತೊಂದರೆ ಕೊಟ್ಟವರು ಯಾವಾಗಲೂ ಖುಷಿಯಾಗಿರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ನಮ್ಮ ಇಡೀ ಕರ್ನಾಟಕದಲ್ಲಿ ಯಾವ ಶಾಸಕರಿಗೂ ನೋಟಿಸ್ ನೀಡಿಲ್ಲ ಆದರೆ ನನಗೆ ಮಾತ್ರ ನೀಡಿದ್ದಾರೆ. ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣವನ್ನು ನನ್ನೊಬ್ಬನ ಮೇಲೆ ಯಾಕೆ ಮಾಡುತ್ತಿದ್ದಾರೆ, ಅಷ್ಟೆ ಅಲ್ಲದೇ ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟಿಸ್ ಕೊಡುತ್ತಾರೆ ಅಂದರೆ ಅವರ ದ್ವೇಷ ಎಷ್ಟರಮಟ್ಟಿಗಿದೆ ಅನ್ನೋದು ಅರ್ಥವಾಗುತ್ತದೆ ಎಂದರು”.
ಇನ್ನು “ಬಿಜೆಪಿಯವರು ಯಾವಾಗಲೂ ನನ್ನ ವಿರುದ್ಧ ದ್ವೇಷದ ರಾಜಕಾರಣವೇ ಮಾಡುತ್ತ ಬಂದಿದ್ದಾರೆ. ಎಫ್ಐಆರ್ ಹಾಕುವ ಜೊತೆಗೆ ನೋಟಿಸ್ ಸಹ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ರಾಜಕೀಯದ ಕುಮ್ಮಕ್ಕಿಲ್ಲದೆ ಸಿಬಿಐ ಅಧಿಕಾರಿಗಳು ಈ ರೀತಿ ವರ್ತಿಸುತ್ತಿರಲಿಲ್ಲ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಆದರೆ ನ್ಯಾಯ ಸಮ್ಮತ ತನಿಖೆ ನಡೆಸಬೇಕು, ನಾನು ಕಾನೂನಿಗೆ ಗೌರವ ಕೊಡುತ್ತೇನೆ “ಎಂದು ಹೇಳಿದ್ದಾರೆ.ಅವರು ಏನು ಬೇಕಾದ್ರೂ ಮಾಡಿಕೊಳ್ಳಲಿ. ಆದರೆ ನ್ಯಾಯ ಸಮ್ಮತ ತನಿಖೆ ನಡೆಸಲಿ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಯಾರೂ ಗಾಬರಿಪಟ್ಟುಕೊಳ್ಳಬೇಡಿ, ಸಿಬಿಐ ಕಚೇರಿ ಕಡೆ ಬರಬೇಡಿ. ನನ್ನ ಪರವಾದ ಹೇಳಿಕೆಗಳನ್ನೂ ನೀಡಬೇಡಿ’ ಎಂದು ಮುಖಂಡರಿಗೆ ಮನವಿ ಮಾಡಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…