ಕಲಬುರ್ಗಿ: ಸಿಬಿಐ ಅಧಿಕಾರಿಗಳು ನನ್ನ ಮಗಳ ನಿಶ್ಚಿತಾರ್ಥದಂದೆ ನನಗೆ ನೋಟಿಸ್ ನೀಡಿದ್ದು, ಕರ್ನಾಟಕದಲ್ಲಿ ದ್ವೇಷದ ರಾಜಕಾರಣ ಮಿತಿಮೀರಿದೆ ಆದರೆ ನನಗೆ ತೊಂದರೆ ಕೊಟ್ಟವರು ಯಾವಾಗಲೂ ಖುಷಿಯಾಗಿರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ” ನಮ್ಮ ಇಡೀ ಕರ್ನಾಟಕದಲ್ಲಿ ಯಾವ ಶಾಸಕರಿಗೂ ನೋಟಿಸ್ ನೀಡಿಲ್ಲ ಆದರೆ ನನಗೆ ಮಾತ್ರ ನೀಡಿದ್ದಾರೆ. ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ದ್ವೇಷದ ರಾಜಕಾರಣವನ್ನು ನನ್ನೊಬ್ಬನ ಮೇಲೆ ಯಾಕೆ ಮಾಡುತ್ತಿದ್ದಾರೆ, ಅಷ್ಟೆ ಅಲ್ಲದೇ ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟಿಸ್ ಕೊಡುತ್ತಾರೆ ಅಂದರೆ ಅವರ ದ್ವೇಷ ಎಷ್ಟರಮಟ್ಟಿಗಿದೆ ಅನ್ನೋದು ಅರ್ಥವಾಗುತ್ತದೆ ಎಂದರು”.
ಇನ್ನು “ಬಿಜೆಪಿಯವರು ಯಾವಾಗಲೂ ನನ್ನ ವಿರುದ್ಧ ದ್ವೇಷದ ರಾಜಕಾರಣವೇ ಮಾಡುತ್ತ ಬಂದಿದ್ದಾರೆ. ಎಫ್ಐಆರ್ ಹಾಕುವ ಜೊತೆಗೆ ನೋಟಿಸ್ ಸಹ ನೀಡಿದ್ದಾರೆ. ಇದು ರಾಜಕೀಯ ಪ್ರೇರಿತ ಅನ್ನೋದು ಮೇಲ್ನೋಟಕ್ಕೆ ಗೊತ್ತಾಗುತ್ತದೆ. ರಾಜಕೀಯದ ಕುಮ್ಮಕ್ಕಿಲ್ಲದೆ ಸಿಬಿಐ ಅಧಿಕಾರಿಗಳು ಈ ರೀತಿ ವರ್ತಿಸುತ್ತಿರಲಿಲ್ಲ, ಅವರು ಏನು ಬೇಕಾದರೂ ಮಾಡಿಕೊಳ್ಳಲಿ, ಆದರೆ ನ್ಯಾಯ ಸಮ್ಮತ ತನಿಖೆ ನಡೆಸಬೇಕು, ನಾನು ಕಾನೂನಿಗೆ ಗೌರವ ಕೊಡುತ್ತೇನೆ “ಎಂದು ಹೇಳಿದ್ದಾರೆ.ಅವರು ಏನು ಬೇಕಾದ್ರೂ ಮಾಡಿಕೊಳ್ಳಲಿ. ಆದರೆ ನ್ಯಾಯ ಸಮ್ಮತ ತನಿಖೆ ನಡೆಸಲಿ. ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಯಾರೂ ಗಾಬರಿಪಟ್ಟುಕೊಳ್ಳಬೇಡಿ, ಸಿಬಿಐ ಕಚೇರಿ ಕಡೆ ಬರಬೇಡಿ. ನನ್ನ ಪರವಾದ ಹೇಳಿಕೆಗಳನ್ನೂ ನೀಡಬೇಡಿ’ ಎಂದು ಮುಖಂಡರಿಗೆ ಮನವಿ ಮಾಡಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…