Featured

ಬಿಜೆಪಿಯವರ ಗೋಡ್ಸೆ ಭಾರತ ಮಾಡುವ ಷಡ್ಯಂತ್ರವನ್ನು ಸೋಲಿಸೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ಬಿಜೆಪಿಯವರ ಗೋಡ್ಸೆ ಭಾರತ ಮಾಡುವ ಷಡ್ಯಂತ್ರವನ್ನು ಸೋಲಿಸೋಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಮಹಾತ್ಮ ಗಾಂಧಿ ಭಾರತದ ಪ್ರಜ್ಞೆ. ಗಾಂಧಿಯ ದೇಹ ಕೊಂದರೂ ವಿಚಾರಗಳನ್ನು ಕೊಲ್ಲಲು ಅಸಾಧ್ಯ. ಬಿಜೆಪಿಯವರಿಗೆ ಗೋಡ್ಸೆ ನಾಯಕ. ಗೋಡ್ಸೆ ಭಾರತ ಮಾಡುವ ಬಿಜೆಪಿ ಷಡ್ಯಂತ್ರವನ್ನು ಸೋಲಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಕೆಪಿಸಿಸಿ ಕಛೇರಿಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಿದ್ದ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಅಧಿವೇಶನಕ್ಕೆ ನೂರು ವರ್ಷಗಳ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ “ಗಾಂಧಿ ಭಾರತ” ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

“ಮಹಾತ್ಮಗಾಂಧಿ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನ ಐತಿಹಾಸಿಕವಾದದ್ದು. ಗಾಂಧಿ ಜಗತ್ತು ಕಂಡ ಅಪರೂಪದ ಸಂತ. ಗಾಂಧಿ ವಿಚಾರದಲ್ಲಿ ಬಿಜೆಪಿ ಬಹಳ ಕೆಳಮಟ್ಟದ ರಾಜಕಾರಣ ಮಾಡುತ್ತಿದೆ. ಬಿಜೆಪಿ ಗೋಡ್ಸೆ ಭಾರತ ಮಾಡಲು ಹೊರಟಿದೆ. ಈ ಷಡ್ಯಂತ್ರವನ್ನು ನಾವು ಸೋಲಿಸಬೇಕಿದೆ” ಎಂದು ಹೇಳಿದರು.

ʼಗಾಂಧಿ ಭಾರತದ ಆತ್ಮ. ಭಾರತದ ಪ್ರಜ್ಞೆ. ಇಲ್ಲಿ ಗೋಡ್ಸೆಗಳನ್ನು ಬೆಳೆಯಲು ಬಿಡಬಾರದು. ಧರ್ಮದ ಹೆಸರಲ್ಲಿ, ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರ ಮಾಡಲು ಅವಕಾಶ ಕೊಡಬಾರದು. ಕೋಮು ಶಕ್ತಿಗಳನ್ನು ಸೋಲಿಸಬೇಕು. ಕೋಮು ದುಷ್ಟಶಕ್ತಿಗಳು ರಾಜ್ಯದ, ದೇಶದ ಅಭಿವೃದ್ಧಿಗೆ ಮಾರಕ. ಬಿಜೆಪಿ ಅಧಿಕಾರದಲ್ಲಿ ಇದ್ದಾಗೆಲ್ಲಾ ಸಮಾಜವನ್ನು, ಜಾತಿ, ಧರ್ಮದ ಹೆಸರಲ್ಲಿ ವಿಭಜಿಸುತ್ತಿದ್ದರೇ ಹೊರತು ಜನಪರವಾದ, ಅಭಿವೃದ್ಧಿ ಪರವಾದ ಕಾರ್ಯಕ್ರಮಗಳನ್ನು ರೂಪಿಸಲೇ ಇಲ್ಲ. ಜಾರಿ ಮಾಡಲೂ ಇಲ್ಲ. ಬಿಜೆಪಿಗೆ ಜನಪರ ಪ್ರಗತಿ ಮುಖ್ಯ ಅಲ್ಲವೇ ಅಲ್ಲʼ ಎಂದರು.

ನಾವು ಸರ್ವ ಜಾತಿ, ಜನಾಂಗ, ಧರ್ಮದವರಿಗೆ ಮತ್ತು ಸರ್ವ ವರ್ಗದವರ ಏಳೆಗೆಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಿದರೆ, ಈ ಜನಪರ ಕಾರ್ಯಕ್ರಮಗಳ ವಿರುದ್ಧ ತಪ್ಪು ಮಾಹಿತಿ ನೀಡಿ ಫಲಾನುಭವಿಗಳನ್ನು ಅವಮಾನಿಸಿದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

14 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

14 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

15 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

15 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

15 hours ago