Featured

ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ : ಬಿಜೆಪಿ ವಿರುದ್ಧ ಡಿಕೆ ಶಿ  ಕಿಡಿ- Vishwanews24

ಬಿಜೆಪಿಯವ್ರು  ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ :  ಡಿಕೆ ಶಿ

ಬೆಂಗಳೂರು: ಮುಸ್ಲಿನರು ಓಡಿ ಹೋಗಬೇಕು ಅಂತ ಮಾನಸಿಕವಾಗಿ ಹಿಂಸೆ ಕೊಡುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ನೇಹಾ ಹಿರೇಮಠ ಹತ್ಯೆ  ಖಂಡಿಸಿ ಬಿಜೆಪಿ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವ ಜನಾಂಗದ ಶಾಂತಿಯ ತೋಟ ನಮ್ಮದು. ಇವರ ಕೈಯಲ್ಲಿ ಸಂವಿಧಾನ ಬದಲಾವಣೆ ಮಾಡೋಕೆ ಆಗುತ್ತಾ..?. ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕಿದೆ. ಹಾಗಂತ ಕ್ರಿಮಿನಲ್ ಗಳಿಗೆ ಅಂಥಹ ಪ್ರಕರಣಗಳಿಗೆ ನಾವು ರಕ್ಷಣೆ ಕೊಡಲ್ಲ. ಯಾರಿಗೂ ನಾವು ಅಂತಹ ಘಟನೆಗಳಿಗೆ ಅವಕಾಶ ಕೊಡಲ್ಲ. ಈ ರಾಜ್ಯ ಶಾಂತಿಯಿಂದ ಇದೆ ಎಂದರು.

ಇದೇ ವೇಳೆ ಬಿಜೆಪಿ (BJP) ಜಾಹೀರಾತು ವಿಚಾರಕ್ಕೆ ಪ್ರತಿಕ್ರಿಯಿಸಿ, ಸದ್ಯ ಅಷ್ಟು ಎಚ್ಚರಿಕೆ ಆಗಿದೆಯಲ್ವಾ ಅಷ್ಟು ಸಾಕು. ಖಾಲಿ ಚೊಂಬು ಇಟ್ಟುಕೊಂಡು ಗೌರವಾನ್ವಿತ ದೇವೇಗೌಡರು ಮೋದಿಗೆ ಹೇಳಿದ್ದಾರೆ. ನಿಮ್ಮಿಂದ ಇಂಥ ಅನ್ಯಾಯ ಆಯ್ತು. ನೀವು ನಮಗೆ ಚೊಂಬು ಕೊಟ್ಬಿಟ್ರಿ, ನಮಗೆ ಮಾತಾಡೋಕೆ ಶಕ್ತಿ ಇಲ್ಲದ ಹಾಗೆ ಆಗಿದೆ ಅಂದಿದ್ದಾರೆ. ಸಾರ್ವಜನಿಕವಾಗಿ ಏನು ಬೇಕಾದ್ರೂ ಮಾತಾಡಲಿ. ಆದರೆ ಹಿಂದೆಯಲ್ಲ ಕುಮಾರಸ್ವಾಮಿ ದೇವೇಗೌಡರು ಅವರೇ ಅನ್ಯಾಯ ಅಗಿದೆ ಅಂತ ಭಾಷಣ ಮಾಡಿದ್ರಲ್ವಾ?. ನಾವು ಈಗ ಮೋದಿಗೆ ಪ್ರಶ್ನೆ ಕೇಳಿದ್ದೇವೆ ಅಷ್ಟೆ. ಆದರೆ ಜನ ಎಲ್ಲದನ್ನೂ ನೋಡ್ತಾ ಇದ್ದಾರೆ ಅವರೇ ಡಿಸೈಡ್ ಮಾಡ್ತಾರೆ. ಪ್ರಜ್ಞೆ ನಾಗರೀಕರಿಗೆ ಇದೆ ಎಂದರು.

ಸಿದ್ದರಾಮಯ್ಯ, ನಾನು ಕಾಂಗ್ರೆಸ್ ನಾಯಕರು 15 ಲಕ್ಷ ಚೊಂಬಲ್ಲಿ ಬಂದಿದ್ಯಾ ಅಂತ ಪ್ರಶ್ನೆ ಮಾಡ್ತಾ ಇದ್ದೇವೆ. ನೌಕರಿ ಕೊಟ್ಟಿದ್ದಾರಾ..? ಏನು ಮಾಡಿದ್ದಾರೆ ಅವರೇ ಹೇಳಲಿ. ಈಗ ಕರ್ನಾಟಕಕ್ಕೆ ಖಾಲಿ ಚೊಂಬು ತಾನೇ ಇವರು ಕೊಟ್ಟಿರೋದು. ಕನ್ನಡ ಸ್ವಾಭಿಮಾನ ಎತ್ತಿ ಹಿಡಿದವರು ನಾವು.ನಮ್ಮ ಹಕ್ಕು ಕೇಳಿರುವವರು ನಾವು ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

1 hour ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

21 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

21 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

22 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

22 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

22 hours ago