ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಕೊಡದ ವಿಚಾರವಾಗಿ, ಆ ಬಗ್ಗೆ ಬಿಜೆಪಿಯವರನ್ನು ಕೇಳಿ ಎಂದರು. ಅತೃಪ್ತರ ವಿಚಾರ ಕುರಿತು, ಕಾಂಗ್ರೆಸ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಅವರಿಗೆ ಕೃತಜ್ಞತೆ ತಿಳಿಸಲು ಭೇಟಿ ಮಾಡಿರುವುದಾಗಿ ಎಚ್ಡಿಕೆ ತಿಳಿಸಿದರು.
ಭೇಟಿ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ, “ಯಾವುದೇ ರಾಜಕೀಯ ಚರ್ಚೆ ಮಾಡಲು ಭೇಟಿ ಮಾಡಿಲ್ಲ. ರಾಜೀನಾಮೆ ನೀಡಿದ ಬಳಿಕ ನಮ್ಮ ಮನವಿ ಮೇರೆಗೆ ವಾಪಸ್ ಪಡೆದಿದ್ದರು. ನಾವು ಅವರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ನಮ್ಮ ಪರ ಮತ ಹಾಕಿದ್ದರು. ಅಧಿವೇಶನದಲ್ಲಿ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಇವತ್ತು ಬಂದು ಕೃತಜ್ಞತೆ ಸಲ್ಲಿಸಿದ್ದೇವೆ. ರಾಮಲಿಂಗಾರೆಡ್ಡಿ ಕಾಂಗ್ರೆಸ್ನ ಹಿರಿಯ ನಾಯಕರು. ಪಕ್ಷದ ಬಗ್ಗೆ ಅವರಿಗಿರುವ ಕಾಳಜಿ ಬಗ್ಗೆ ಹೆಮ್ಮೆ ಇದೆ,” ಎಂದರು.
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…
ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…