ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಕೊಡದ ವಿಚಾರವಾಗಿ, ಆ ಬಗ್ಗೆ ಬಿಜೆಪಿಯವರನ್ನು ಕೇಳಿ ಎಂದರು. ಅತೃಪ್ತರ ವಿಚಾರ ಕುರಿತು, ಕಾಂಗ್ರೆಸ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಅವರಿಗೆ ಕೃತಜ್ಞತೆ ತಿಳಿಸಲು ಭೇಟಿ ಮಾಡಿರುವುದಾಗಿ ಎಚ್ಡಿಕೆ ತಿಳಿಸಿದರು.
ಭೇಟಿ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ, “ಯಾವುದೇ ರಾಜಕೀಯ ಚರ್ಚೆ ಮಾಡಲು ಭೇಟಿ ಮಾಡಿಲ್ಲ. ರಾಜೀನಾಮೆ ನೀಡಿದ ಬಳಿಕ ನಮ್ಮ ಮನವಿ ಮೇರೆಗೆ ವಾಪಸ್ ಪಡೆದಿದ್ದರು. ನಾವು ಅವರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ನಮ್ಮ ಪರ ಮತ ಹಾಕಿದ್ದರು. ಅಧಿವೇಶನದಲ್ಲಿ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಇವತ್ತು ಬಂದು ಕೃತಜ್ಞತೆ ಸಲ್ಲಿಸಿದ್ದೇವೆ. ರಾಮಲಿಂಗಾರೆಡ್ಡಿ ಕಾಂಗ್ರೆಸ್ನ ಹಿರಿಯ ನಾಯಕರು. ಪಕ್ಷದ ಬಗ್ಗೆ ಅವರಿಗಿರುವ ಕಾಳಜಿ ಬಗ್ಗೆ ಹೆಮ್ಮೆ ಇದೆ,” ಎಂದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…