ಬೆಂಗಳೂರು: ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಯಾರೂ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮುಂದಿನ ಸರ್ಕಾರ ಯಾರೇ ರಚನೆ ಮಾಡಿದರೂ ಸ್ಥಿರ ಸುಭದ್ರ ಸರ್ಕಾರ ಕೊಡಲು ಸಾಧ್ಯವಿಲ್ಲ. ಅಭಿವೃದ್ಧಿ ಕಡೆ ಗಮನ ಕೊಡುತ್ತಾರೋ, ಚುನಾವಣೆ ಮಾಡೋಕೆ ಸಮಯ ಕೊಡುತ್ತಾರೋ ಗೊತ್ತಿಲ್ಲ. ಹೀಗಾಗಿ ಸರ್ಕಾರ ಸ್ಥಿರವಾಗಿ ಇರಲು ಸಾಧ್ಯವಿಲ್ಲ. ಬಿಜೆಪಿಯಿಂದ ಸ್ಥಿರ ಸರ್ಕಾರ ಸಾಧ್ಯವಿಲ್ಲ ಎಂದು ಹೇಳಿದರು.
ಬಿಜೆಪಿ ನಾಯಕರು ಸರ್ಕಾರ ರಚನೆಗೆ ಗ್ರೀನ್ ಸಿಗ್ನಲ್ ಕೊಡದ ವಿಚಾರವಾಗಿ, ಆ ಬಗ್ಗೆ ಬಿಜೆಪಿಯವರನ್ನು ಕೇಳಿ ಎಂದರು. ಅತೃಪ್ತರ ವಿಚಾರ ಕುರಿತು, ಕಾಂಗ್ರೆಸ್ ನಾಯಕರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದರು.
ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ವಾಪಸ್ ಪಡೆದ ರಾಮಲಿಂಗಾರೆಡ್ಡಿ ಅವರಿಗೆ ಕೃತಜ್ಞತೆ ತಿಳಿಸಲು ಭೇಟಿ ಮಾಡಿರುವುದಾಗಿ ಎಚ್ಡಿಕೆ ತಿಳಿಸಿದರು.
ಭೇಟಿ ಬಳಿಕ ಮಾತನಾಡಿದ ಹಂಗಾಮಿ ಸಿಎಂ ಎಚ್.ಡಿ.ಕುಮಾರಸ್ವಾಮಿ, “ಯಾವುದೇ ರಾಜಕೀಯ ಚರ್ಚೆ ಮಾಡಲು ಭೇಟಿ ಮಾಡಿಲ್ಲ. ರಾಜೀನಾಮೆ ನೀಡಿದ ಬಳಿಕ ನಮ್ಮ ಮನವಿ ಮೇರೆಗೆ ವಾಪಸ್ ಪಡೆದಿದ್ದರು. ನಾವು ಅವರಿಗೆ ಕೃತಜ್ಞತೆ ಸಲ್ಲಿಸಬೇಕಿತ್ತು. ನಮ್ಮ ಪರ ಮತ ಹಾಕಿದ್ದರು. ಅಧಿವೇಶನದಲ್ಲಿ ಕೃತಜ್ಞತೆ ಸಲ್ಲಿಸಲು ಆಗಿರಲಿಲ್ಲ. ಇವತ್ತು ಬಂದು ಕೃತಜ್ಞತೆ ಸಲ್ಲಿಸಿದ್ದೇವೆ. ರಾಮಲಿಂಗಾರೆಡ್ಡಿ ಕಾಂಗ್ರೆಸ್ನ ಹಿರಿಯ ನಾಯಕರು. ಪಕ್ಷದ ಬಗ್ಗೆ ಅವರಿಗಿರುವ ಕಾಳಜಿ ಬಗ್ಗೆ ಹೆಮ್ಮೆ ಇದೆ,” ಎಂದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…