ನವದೆಹಲಿ: “ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದ್ದು ನಾನು ಇದನ್ನು ಸ್ವಾಗತಿಸುತ್ತೇನೆ. ಇನ್ನೇನಿದ್ದರೂ ನಾನು ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ” ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ಕೊಟ್ಟ ಬೆನ್ನಲ್ಲೇ ಮಾತಾಡಿದ ಅವರು, “ಸುಪ್ರೀಂನಲ್ಲಿ ತೀರ್ಪು ನಮ್ಮ ಪರವಾಗಿ ಬಂದಿರುವುದರಿಂದ ನೆಮ್ಮದಿಯಾಗಿದೆ. ನಮ್ಮ ರಾಜೀನಾಮೆ ಸ್ಪೀಕರ್ ಅಂದು ಅಂಗೀಕರಿಸಬೇಕಿತ್ತು ಎಂದು ನಾನು ಹಲವಾರು ಬಾರಿ ಹೇಳಿಕೊಂಡಿದ್ದೇನೆ. ಬಿಜೆಪಿಯಿಂದ ಟಿಕೆಟ್ ಪಡೆದು ನಾನು ಸ್ಪರ್ಧಿಸುವುದು ಖಚಿತ ಆದರೆ ಬೇರೆಯವರ ವಿಚಾರ ಗೊತ್ತಿಲ್ಲ”.
“ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಇನ್ನು ಯಡಿಯೂರಪ್ಪ ಅವರ ಸರ್ಕಾರ ಮೂರೂವರೆ ವರ್ಷ ಬಲಿಷ್ಠವಾಗಿರುವುದು ಖಂಡಿತಾ. ಅಮಿತ್ ಶಾ, ಮೋದಿ ಅವರ ನೇತೃತ್ವದಲ್ಲಿ ನಾವೆಲ್ಲಾ ಮುನ್ನಡೆಯುತ್ತೇವೆ” ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…