ಹುಬ್ಬಳ್ಳಿ: ವಕ್ಫ್ ವಿಚಾರವಾಗಿ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆದರೆ ಬಿಜೆಪಿಯವರು ರಾಜಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಇವರ ಕಾಲದಲ್ಲಿ ನೋಟಿಸ್ ನೀಡಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಯಾವಾಗಲೂ ಸಮಸ್ಯೆ ಮೇಲೆ ಹೋರಾಟ ಮಾಡುವುದಿಲ್ಲ. ಇಡೀ ಪಕ್ಷ ಸುಳ್ಳು ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿ ಹೋರಾಟ ಮಾಡುವುದೆ ಇವರ ಕೆಲಸ. ಇದೀಗ ಉಪ ಚುನಾವಣೆ ಹಾಗೂ ರಾಜಕಾರಣಕ್ಕಾಗಿ ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
ಇವರ ಕಾಲದಲ್ಲಿ 246 ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದಾರೆ. ಇದರ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅಂದು ನೋಟಿಸ್ ನೀಡಿದ ಬೊಮ್ಮಾಯಿ ಇದೀಗ ಉಲ್ಟಾ ಮಾತನಾಡುತ್ತಿದ್ದಾರೆ. ವಕ್ಫ್ ಆಸ್ತಿ ನಿನ್ನೆ ಮೊನ್ನೆಯದಲ್ಲ. ಎಲ್ಲಾ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ ಎಂದರು.
ನಾನು, ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸಭೆ ಮಾಡಿ ವಾಪಸ್ಸು ತೆಗೆದುಕೊಳ್ಳಲು ಸೂಚನೆ ನೀಡಿದ್ದೇವೆ. ವಿಚಾರಣೆ ಇಲ್ಲದೆ ಪಹಣಿ ಬದಲಾವಣೆ ಆಗಿದ್ದರೆ ರದ್ದು ಮಾಡಬೇಕು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲು ಎಬ್ಬಿಸಬಾರದು ಎಂದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…