Featured

ಉಪಚುನಾವಣೆ ಹಾಗೂ ರಾಜಕಾರಣಕ್ಕಾಗಿ ಬಿಜೆಪಿಯಿಂದ ವಕ್ಫ್  ಹೋರಾಟ: ಸಿಎಂ ಸಿದ್ದರಾಮಯ್ಯ – vishwanews24

ಬಿಜೆಪಿಯಿಂದ ಉಪಚುನಾವಣೆ ಹಾಗೂ ರಾಜಕಾರಣಕ್ಕಾಗಿ ವಕ್ಫ್  ಹೋರಾಟ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ವಕ್ಫ್ ವಿಚಾರವಾಗಿ ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಆದರೆ ಬಿಜೆಪಿಯವರು ರಾಜಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಇವರ ಕಾಲದಲ್ಲಿ ನೋಟಿಸ್ ನೀಡಿರುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಯಾವಾಗಲೂ ಸಮಸ್ಯೆ ಮೇಲೆ ಹೋರಾಟ ಮಾಡುವುದಿಲ್ಲ. ಇಡೀ ಪಕ್ಷ ಸುಳ್ಳು ಆರೋಪ ಮಾಡಿ ಜನರ ದಿಕ್ಕು ತಪ್ಪಿಸಿ ಹೋರಾಟ ಮಾಡುವುದೆ ಇವರ ಕೆಲಸ. ಇದೀಗ ಉಪ ಚುನಾವಣೆ ಹಾಗೂ ರಾಜಕಾರಣಕ್ಕಾಗಿ ವಕ್ಫ್ ವಿಚಾರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.

ಇವರ ಕಾಲದಲ್ಲಿ 246 ಪ್ರಕರಣಗಳಲ್ಲಿ ನೋಟಿಸ್ ನೀಡಿದ್ದಾರೆ. ಇದರ ಬಗ್ಗೆ ಬಿಜೆಪಿಯವರು ಯಾಕೆ ಮಾತನಾಡುತ್ತಿಲ್ಲ. ಅಂದು ನೋಟಿಸ್ ನೀಡಿದ ಬೊಮ್ಮಾಯಿ ಇದೀಗ ಉಲ್ಟಾ ಮಾತನಾಡುತ್ತಿದ್ದಾರೆ. ವಕ್ಫ್ ಆಸ್ತಿ ನಿನ್ನೆ ಮೊನ್ನೆಯದಲ್ಲ. ಎಲ್ಲಾ ಕಾಲದಲ್ಲೂ ನೋಟಿಸ್ ಕೊಟ್ಟಿದ್ದಾರೆ ಎಂದರು.
ನಾನು, ಸಚಿವರಾದ ಎಚ್.ಕೆ.ಪಾಟೀಲ್, ಕೃಷ್ಣಬೈರೇಗೌಡ ಸಭೆ ಮಾಡಿ ವಾಪಸ್ಸು ತೆಗೆದುಕೊಳ್ಳಲು ಸೂಚನೆ ನೀಡಿದ್ದೇವೆ. ವಿಚಾರಣೆ ಇಲ್ಲದೆ ಪಹಣಿ ಬದಲಾವಣೆ ಆಗಿದ್ದರೆ ರದ್ದು ಮಾಡಬೇಕು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲು ಎಬ್ಬಿಸಬಾರದು ಎಂದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

16 hours ago