ನವದೆಹಲಿ: ವ್ಯಾಪಕ ಚರ್ಚೆ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಎನ್ಡಿಎ ಮೈತ್ರಿಕೂಟ ತೆರೆ ಎಳೆದಿದೆ. ಬಿಜೆಪಿಯಿಂದಲೇ ಮುಂದಿನ ಅಭ್ಯರ್ಥಿ ಆಯ್ಕೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸ ಮುಗಿಸಿ ವಾಪಸ್ ಆದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಸೈದ್ಧಾಂತಿಕ ಹೊಂದಾಣಿಕೆ ಹಾಗೂ ಸಂಸದೀಯ ಕಾರ್ಯವಿಧಾನದಲ್ಲಿ ಹೆಚ್ಚಿನ ಅನುಭವ ಹೊಂದಿರುವ ವ್ಯಕ್ತಿಯನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈಗ ಆಯ್ಕೆಯಾಗುವ ರಾಷ್ಟ್ರಪತಿಗಳು 5 ವರ್ಷಗಳ ಅಧಿಕಾರವಧಿಯಲ್ಲಿ ಇರುತ್ತಾರೆ.
ಎನ್ಡಿಎ ಭಾಗವಾದ ಜೆಡಿ(ಯು) ನಿಂದ ಉಪ ರಾಷ್ಟ್ರಪತಿ ಹುದ್ದೆಗೆ ಯಾರೊಬ್ಬರೂ ಸ್ಪರ್ಧೆಯಲ್ಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷ (TDP) ಮತ್ತು ಜೆಡಿ(ಯು) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬಿಜೆಪಿಯಿಂದಲೇ ಅಭ್ಯರ್ಥಿ ಆಯ್ಕೆ ಮಾಡಲು ಒಮ್ಮತ ಸೂಚಿಸಿವೆ ಎಂದು ಹೇಳಲಾಗಿದೆ. ಸದ್ಯ ಪ್ರಧಾನಿ ಮೋದಿ ಅವರು ಬ್ರಿಟನ್, ಮಾಲ್ಡೀವ್ಸ್ ಪ್ರವಾಸದಲ್ಲಿದ್ದು, ವಾಪಸ್ ಬಂದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…