ನವದೆಹಲಿ: ವ್ಯಾಪಕ ಚರ್ಚೆ ಬೆನ್ನಲ್ಲೇ ಭಾರತದ ಮುಂದಿನ ಉಪ ರಾಷ್ಟ್ರಪತಿ ಯಾರಾಗುತ್ತಾರೆ ಎಂಬ ಕುತೂಹಲಕ್ಕೆ ಎನ್ಡಿಎ ಮೈತ್ರಿಕೂಟ ತೆರೆ ಎಳೆದಿದೆ. ಬಿಜೆಪಿಯಿಂದಲೇ ಮುಂದಿನ ಅಭ್ಯರ್ಥಿ ಆಯ್ಕೆಯಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶಿ ಪ್ರವಾಸ ಮುಗಿಸಿ ವಾಪಸ್ ಆದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಮೂಲಗಳ ಪ್ರಕಾರ, ಬಿಜೆಪಿಯೊಂದಿಗೆ ಸೈದ್ಧಾಂತಿಕ ಹೊಂದಾಣಿಕೆ ಹಾಗೂ ಸಂಸದೀಯ ಕಾರ್ಯವಿಧಾನದಲ್ಲಿ ಹೆಚ್ಚಿನ ಅನುಭವ ಹೊಂದಿರುವ ವ್ಯಕ್ತಿಯನ್ನ ಆಯ್ಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಈಗ ಆಯ್ಕೆಯಾಗುವ ರಾಷ್ಟ್ರಪತಿಗಳು 5 ವರ್ಷಗಳ ಅಧಿಕಾರವಧಿಯಲ್ಲಿ ಇರುತ್ತಾರೆ.
ಎನ್ಡಿಎ ಭಾಗವಾದ ಜೆಡಿ(ಯು) ನಿಂದ ಉಪ ರಾಷ್ಟ್ರಪತಿ ಹುದ್ದೆಗೆ ಯಾರೊಬ್ಬರೂ ಸ್ಪರ್ಧೆಯಲ್ಲಿಲ್ಲ. ಹೀಗಾಗಿ ತೆಲುಗು ದೇಶಂ ಪಕ್ಷ (TDP) ಮತ್ತು ಜೆಡಿ(ಯು) ಸೇರಿದಂತೆ ಮೈತ್ರಿಕೂಟದ ಎಲ್ಲಾ ಪಕ್ಷಗಳು ಬಿಜೆಪಿಯಿಂದಲೇ ಅಭ್ಯರ್ಥಿ ಆಯ್ಕೆ ಮಾಡಲು ಒಮ್ಮತ ಸೂಚಿಸಿವೆ ಎಂದು ಹೇಳಲಾಗಿದೆ. ಸದ್ಯ ಪ್ರಧಾನಿ ಮೋದಿ ಅವರು ಬ್ರಿಟನ್, ಮಾಲ್ಡೀವ್ಸ್ ಪ್ರವಾಸದಲ್ಲಿದ್ದು, ವಾಪಸ್ ಬಂದ ಬಳಿಕ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ವರದಿಗಳು ತಿಳಿಸಿವೆ.
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…
ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…