ಜಿಲ್ಲೆ

ಬಿಜೆಪಿಯಿಂದ ವಿ. ಸುನಿಲ್‌ ಕುಮಾರ್‌ ಹೆಸರು ಅಂತಿಮ ; 4ನೇ ಬಾರಿಗೆ ಸ್ಪರ್ಧೆ

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 2018ರ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲು ಹಾಲಿ ಶಾಸಕ ವಿ. ಸುನಿಲ್‌ ಕುಮಾರ್‌ ಅವರ ಹೆಸರು ಅಂತಿಮಗೊಂಡಿದೆ. ಎ. 8ರಂದು ಬಿಜೆಪಿ ಹೈಕಮಾಂಡ್‌ ಬಿಡುಗಡೆಗೊಳಿಸಿದ ಅಭ್ಯರ್ಥಿಗಳ ಮೊದಲ ಪಟ್ಟಿಯ 72 ಮಂದಿಯ ಪೈಕಿ ಸುನಿಲ್‌ ಕುಮಾರ್‌ ಅವರ ಹೆಸರೂ ಸೇರಿದೆ. ಅವರು ಎ. 23ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಸಾಕಷ್ಟು ಕಾರ್ಯ ಕ್ರಮಗಳನ್ನು ಆಯೋಜಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿದೆ. 34 ಗ್ರಾಮ ಸಮಿತಿ ಸಭೆಗಳನ್ನು ನಡೆಸಲಾಗಿದೆ. ಕ್ಷೇತ್ರದಲ್ಲಿ 2 ಬಾರಿ ಕಾರ್ಯ ಕರ್ತರ ಸಮಾವೇಶ ಹಾಗೂ 1 ಬಾರಿ ಮಹಿಳಾ ಸಮಾವೇಶವನ್ನು ಕ್ಷೇತ್ರ ಮಟ್ಟದಲ್ಲಿ ಮಾಡಲಾಗಿದೆ. ಮಹಿಳಾ ಮೋರ್ಚಾ ಶಕ್ತಿಕೇಂದ್ರದ ಸಮಾವೇಶಗಳು ನಡೆಯುತ್ತಿವೆ. ಬೆಳ್ಮಣ್‌, ಬಜಗೋಳಿ, ಕಾರ್ಕಳ ನಗರ, ಹೆಬ್ರಿ ಮೊದಲಾದ ಭಾಗದಲ್ಲಿ ಮುಕ್ತಾಯಗೊಂಡಿದೆ. ಎ. 13ರಂದು ಮತ್ತೂಂದು ದೊಡ್ಡಮಟ್ಟದ ಕಾರ್ಯಕರ್ತರ ಸಮಾವೇಶ ಕಾರ್ಕಳದಲ್ಲಿ ನಡೆಯಲಿದೆ.

4ನೇ ಬಾರಿಗೆ ಸ್ಪರ್ಧೆ
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ವಿ. ಸುನಿಲ್‌ ಕುಮಾರ್‌ ಅವರು ನಾಲ್ಕನೇ ಬಾರಿಗೆ ಸ್ಪರ್ಧಿಸು ತ್ತಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ವಿ. ಸುನಿಲ್‌ ಕುಮಾರ್‌ ಅವರು ಎಚ್‌. ಗೋಪಾಲ ಭಂಡಾರಿ ಅವರ ವಿರುದ್ಧ ಜಯಗಳಿಸಿದ್ದು, 2008ರಲ್ಲಿ ಭಂಡಾರಿ ವಿರುದ್ಧ ಪರಾಜಿತ ಗೊಂಡಿದ್ದರು. 2013ರಲ್ಲಿ ಮತ್ತೂಮ್ಮೆ ಭಂಡಾರಿ ವಿರುದ್ಧ ಜಯಗಳಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಪ್ರಾರಂಭದಿಂದಲೂ ಒಂದೇ ಹೆಸರು!
ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 2018ರ ಚುನಾವಣೆಗೆ ಬಿಜೆಪಿಯಿಂದ ಹಾಲಿ ಶಾಸಕ ವಿ. ಸುನಿಲ್‌ ಕುಮಾರ್‌ ಅವರ ಹೆಸರು ಕೇಳಿ ಬರುತ್ತಿತ್ತು. ಆದರೆ ಕೆಲವು ಸಂದರ್ಭಲ್ಲಿ ಸುನಿಲ್‌ ಅವರು ಮೂಡಬಿದಿರೆ ಕ್ಷೇತ್ರದಿಂದ ಅಥವಾ ಉಡುಪಿಯಿಂದ ಸ್ಪರ್ಧಿಸುತ್ತಾರೆ ಎನ್ನುವ ಮಾತು ಹರಿದಾಡುತ್ತಿತ್ತಾದರೂ ಅದು ಗಾಳಿ ಸುದ್ದಿ ಎನ್ನಲಾಗುತ್ತಿತ್ತು. ರವಿವಾರ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುತ್ತಲೇ ವಿ. ಸುನಿಲ್‌ ಅವರ ಸ್ಫರ್ಧೆ ಖಚಿತಗೊಂಡಿದ್ದು, ಕಾರ್ಯಕರ್ತರು ಉತ್ಸುಕರಾಗಿದ್ದಾರೆ.

 

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

6 minutes ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

3 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

3 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

3 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

3 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

3 hours ago