ಹುಬ್ಬಳ್ಳಿ : ”ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಪಕ್ಷದ ಎಲ್ಲಾ ಪ್ರಮುಖರನ್ನು ನಾನು ಭೇಟಿಯಾಗಿದ್ದೇನೆ. ಟಿಕೆಟ್ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದೇನೆ. ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ” ಎಂದು ಮುತಾಲಿಕ್ ತಿಳಿಸಿದ್ದಾರೆ.
”ನನಗೆ ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಲಭಿಸುವ ಸಾಧ್ಯತೆ ಶೇ 90ರಷ್ಟು ಇದೆ. ಆದರೆ ರಾಜಕೀಯದಲ್ಲಿ ಕೊನೆ ಘಳಿಗೆಯಲ್ಲೂ ಯಾವುದೇ ಬದಲಾವಣೆಯಾಗುವುದು ಸಹಜ” ಎಂದೂ ಹೇಳಿದ್ದಾರೆ.
”ಒಂದು ವೇಳೆ ಕೊನೆ ಕ್ಷಣದ ಬದಲಾವಣೆಯಿಂದಾಗಿ ನನಗೆ ಟಿಕೆಟ್ ಲಭಿಸದೆ ಬೇರೆಯವರಿಗೆ ಸಿಕ್ಕರೆ ನಾನು ಅವರ ಪರವಾಗಿ ಪ್ರಚಾರ ಮಾಡಲು ಕರೆದರೆ ಹೋಗುತ್ತೇನೆಯೇ ಹೊರತು ಪಕ್ಷದ ವಿರುದ್ದವಾಗಿ ಪಕ್ಷೇತರವಾಗಿಯಂತೂ ಸ್ಪರ್ಧಿಸಲಾರೆ” ಎಂದು ತಿಳಿಸಿದ್ದಾರೆ.
ಇನ್ನು, ”ಇದು ನನ್ನ ರಾಜಕೀಯದ ಕೊನೆಯ ಜೀವನವಾಗಿದೆ. ಇನ್ನೂ ಸ್ಪಲ್ಪ ಸಮಯದಲ್ಲೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದೂ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…