ಹುಬ್ಬಳ್ಳಿ : ”ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ನನಗೆ ಟಿಕೆಟ್ ದೊರೆಯುವ ಸಾಧ್ಯತೆಯಿದೆ” ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದರು.
ಸೋಮವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ”ಪಕ್ಷದ ಎಲ್ಲಾ ಪ್ರಮುಖರನ್ನು ನಾನು ಭೇಟಿಯಾಗಿದ್ದೇನೆ. ಟಿಕೆಟ್ ನೀಡುವ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದೇನೆ. ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ” ಎಂದು ಮುತಾಲಿಕ್ ತಿಳಿಸಿದ್ದಾರೆ.
”ನನಗೆ ಬೆಳಗಾವಿ ಉಪಚುನಾವಣೆಯಲ್ಲಿ ಬಿಜೆಪಿಯ ಟಿಕೆಟ್ ಲಭಿಸುವ ಸಾಧ್ಯತೆ ಶೇ 90ರಷ್ಟು ಇದೆ. ಆದರೆ ರಾಜಕೀಯದಲ್ಲಿ ಕೊನೆ ಘಳಿಗೆಯಲ್ಲೂ ಯಾವುದೇ ಬದಲಾವಣೆಯಾಗುವುದು ಸಹಜ” ಎಂದೂ ಹೇಳಿದ್ದಾರೆ.
”ಒಂದು ವೇಳೆ ಕೊನೆ ಕ್ಷಣದ ಬದಲಾವಣೆಯಿಂದಾಗಿ ನನಗೆ ಟಿಕೆಟ್ ಲಭಿಸದೆ ಬೇರೆಯವರಿಗೆ ಸಿಕ್ಕರೆ ನಾನು ಅವರ ಪರವಾಗಿ ಪ್ರಚಾರ ಮಾಡಲು ಕರೆದರೆ ಹೋಗುತ್ತೇನೆಯೇ ಹೊರತು ಪಕ್ಷದ ವಿರುದ್ದವಾಗಿ ಪಕ್ಷೇತರವಾಗಿಯಂತೂ ಸ್ಪರ್ಧಿಸಲಾರೆ” ಎಂದು ತಿಳಿಸಿದ್ದಾರೆ.
ಇನ್ನು, ”ಇದು ನನ್ನ ರಾಜಕೀಯದ ಕೊನೆಯ ಜೀವನವಾಗಿದೆ. ಇನ್ನೂ ಸ್ಪಲ್ಪ ಸಮಯದಲ್ಲೇ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ” ಎಂದೂ ಮಾಹಿತಿ ನೀಡಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]