ಗದಗ: ಯಡಿಯೂರಪ್ಪ ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ, ಅವರು ರಾಜೀನಾಮೆ ಕೊಡುವುದರಿಂದ ಅಥವಾ ಇನ್ನೊಬ್ಬ ಮುಖ್ಯಮಂತ್ರಿ ಬರುವುದರಿಂದ ರಾಜ್ಯಕ್ಕೆ ಒಳ್ಳೆಯದಾಗುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಸ್ವ ಕ್ಷೇತ್ರ ಬಾದಾಮಿಗೆ ಹೋಗುವ ಮುನ್ನ ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡುವ ವಿಚಾರವಾಗಿ ನಗರದಲ್ಲಿ ಪ್ರತಿಕ್ರಿಯಿಸಿದರು. ಬಿಜೆಪಿಯೇ ಒಂದು ಭ್ರಷ್ಟ ಪಕ್ಷ, ಬಿಜೆಪಿ ತೊಲಗದಿದ್ದರೆ ರಾಜ್ಯಕ್ಕೆ ಮುಕ್ತಿ ಇಲ್ಲ. ಯಡಿಯೂರಪ್ಪ ಕರ್ನಾಟಕ ಕಂಡ ಒಬ್ಬ ಭ್ರಷ್ಟ ಮುಖ್ಯಮಂತ್ರಿ, ಇನ್ನೊಬ್ಬ ಬಂದರೂ ಭ್ರಷ್ಟ ಮುಖ್ಯಮಂತ್ರಿಯೇ ಆಗಿರುತ್ತಾರೆ ಎಂದು ಟೀಕಿಸಿದರು.
ಮುಂದಿನ ಸಿಎಂ ಯಾರಾಗಬಹುದು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಾನೇನು ಬಿಜೆಪಿ ಅಧ್ಯಕ್ಷನೇ? ಅದು ಅವರ ಪಕ್ಷದ ವಿಚಾರ ಎಂದು ಉತ್ತರಿಸಿದರು. ಯಡಿಯೂರಪ್ಪನವರ ಪರ ಸ್ವಾಮೀಜಿಗಳು ನಿಂತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ವಾಮೀಜಿಗಳು ರಾಜಕಾರಣದಲ್ಲಿ ಬರದೇ ಇರುವುದು ಒಳ್ಳೆಯದು, ಧರ್ಮ ಕ್ಷೇತ್ರಕ್ಕೆ ಮಾತ್ರ ಸೀಮಿತ ಇರಬೇಕು ಎಂದು ಹೇಳಿದರು.
ರಾಜ್ಯಕ್ಕೆ ಹೊಸ ಸಿಎಂ ಬಂದರೂ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡವ ನಮ್ಮ ಹೋರಾಟ ಮುಂದುವರಿಯಲಿದೆ. ಕಾಂಗ್ರೆಸ್ ವಲಸಿಗರ ಪರಿಸ್ಥಿತಿ ನನಗೆ ಗೊತ್ತಿಲ್ಲ. ನಮ್ಮ ಪಕ್ಷ ಬಿಟ್ಟು ಬಿಜೆಪಿಗೆ ಹೋದವರಿಗೆ ಜನ ಪಾಠ ಕಲಿಸುತ್ತಾರೆ ಎಂದು ಗುಡುಗಿದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…