ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ ಯತ್ನಾಳ್ ಅವರ ಬಗ್ಗೆ ಚರ್ಚೆ ನಡೆಯುವ ಕುರಿತು ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದನ್ನು ಯತ್ನಾಳ್ ಅವರೂ ಒಪ್ಪಿಕೊಳ್ಳುತ್ತಾರೆ ಎಂದರು.
ಮನುಷ್ಯನ ಸ್ವಭಾವದ ವೀಕ್ನೆಸ್ ಎಲ್ಲರಿಗೂ ಇರುತ್ತದೆ. ಯತ್ನಾಳ್ ನನ್ನ ಹಾಗೂ ನಮ್ಮ ಪುತ್ರರನ್ನು ಟಾರ್ಗೆಟ್ ಮಾಡುತ್ತಿರಬಹುದು. ಆ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಆದರೆ, ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದಾಗಿದೆ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು, ನಾವು ನಾವೇ ಬಡದಾಡಿಕೊಳ್ಳುವುದಲ್ಲ. ಇದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕು. ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ. ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಈಗಾಗಲೇ ಇ.ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ. ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…
ಅಣಬೆ ಬೆಳೆದಿದ್ದ ಹೊಲಕ್ಕೆ ಅದರ ಮಾಲೀಕರಿಂದ ಕ್ರಿಮಿನಾಶಕ ಔಷಧಿ ಸಿಂಪಡಿಕೆ.. ಕೀಟನಾಶಕದ ಅಂಶ ಅಣಬೆಯೊಳಗೆ ಸೇರಿ ವಿಷವಾಗಿ ಮಾರ್ಪಟ್ಟು ಇಡೀ…
ಉಡುಪಿ: ವಂಚನೆ ಹಾಗೂ ಬ್ಲ್ಯಾಕ್ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…
ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…
ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ ಡಿ.ಕೆ. ಶಿ ಬೆಳಗಾವಿ: ಮುಜರಾಯಿ…
ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…