ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ ಯತ್ನಾಳ್ ಅವರ ಬಗ್ಗೆ ಚರ್ಚೆ ನಡೆಯುವ ಕುರಿತು ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದನ್ನು ಯತ್ನಾಳ್ ಅವರೂ ಒಪ್ಪಿಕೊಳ್ಳುತ್ತಾರೆ ಎಂದರು.
ಮನುಷ್ಯನ ಸ್ವಭಾವದ ವೀಕ್ನೆಸ್ ಎಲ್ಲರಿಗೂ ಇರುತ್ತದೆ. ಯತ್ನಾಳ್ ನನ್ನ ಹಾಗೂ ನಮ್ಮ ಪುತ್ರರನ್ನು ಟಾರ್ಗೆಟ್ ಮಾಡುತ್ತಿರಬಹುದು. ಆ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಆದರೆ, ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದಾಗಿದೆ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು, ನಾವು ನಾವೇ ಬಡದಾಡಿಕೊಳ್ಳುವುದಲ್ಲ. ಇದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕು. ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ. ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಈಗಾಗಲೇ ಇ.ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ. ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…