Featured

ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ : ಬಿ.ಎಸ್‌.ಯಡಿಯೂರಪ್ಪ – vishwanews24

ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ : ಬಿ.ಎಸ್‌.ಯಡಿಯೂರಪ್ಪ

ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ ಯತ್ನಾಳ್ ಅವರ ಬಗ್ಗೆ ಚರ್ಚೆ ನಡೆಯುವ ಕುರಿತು ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದನ್ನು ಯತ್ನಾಳ್ ಅವರೂ ಒಪ್ಪಿಕೊಳ್ಳುತ್ತಾರೆ ಎಂದರು.

ಮನುಷ್ಯನ ಸ್ವಭಾವದ ವೀಕ್ನೆಸ್ ಎಲ್ಲರಿಗೂ ಇರುತ್ತದೆ.‌ ಯತ್ನಾಳ್​ ನನ್ನ ಹಾಗೂ ನಮ್ಮ ಪುತ್ರರನ್ನು ಟಾರ್ಗೆಟ್ ಮಾಡುತ್ತಿರಬಹುದು. ಆ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಆದರೆ, ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದಾಗಿದೆ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು, ನಾವು ನಾವೇ ಬಡದಾಡಿಕೊಳ್ಳುವುದಲ್ಲ. ಇದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕು. ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ. ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಈಗಾಗಲೇ ಇ.ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ.‌ ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

8 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

11 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

11 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

11 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

12 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

12 hours ago