ಶಿವಮೊಗ್ಗ: ಬಿಜೆಪಿಯೊಳಗಿನ ಎಲ್ಲ ಗೊಂದಲಗಳಿಗೆ ನಾಳೆ ತೆರೆ ಬೀಳಲಿದೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇಂದು ವಿನೋಬನಗರದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಾಳೆ ಕೋರ್ ಕಮಿಟಿ ಸಭೆ ಇದೆ. ಅಲ್ಲಿ ಶಾಸಕ ಯತ್ನಾಳ್ ಅವರ ಬಗ್ಗೆ ಚರ್ಚೆ ನಡೆಯುವ ಕುರಿತು ನನಗೆ ಮಾಹಿತಿ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ಇದನ್ನು ಯತ್ನಾಳ್ ಅವರೂ ಒಪ್ಪಿಕೊಳ್ಳುತ್ತಾರೆ ಎಂದರು.
ಮನುಷ್ಯನ ಸ್ವಭಾವದ ವೀಕ್ನೆಸ್ ಎಲ್ಲರಿಗೂ ಇರುತ್ತದೆ. ಯತ್ನಾಳ್ ನನ್ನ ಹಾಗೂ ನಮ್ಮ ಪುತ್ರರನ್ನು ಟಾರ್ಗೆಟ್ ಮಾಡುತ್ತಿರಬಹುದು. ಆ ಬಗ್ಗೆ ನನಗೇನೂ ಅಭ್ಯಂತರ ಇಲ್ಲ. ಆದರೆ, ನನ್ನ ಉದ್ದೇಶ ನಾವೆಲ್ಲ ಒಟ್ಟಾಗಿ ಹೋಗಬೇಕೆಂಬುದಾಗಿದೆ. ನಮ್ಮ ಹೋರಾಟ ಕಾಂಗ್ರೆಸ್ ವಿರುದ್ಧವೇ ಹೊರತು, ನಾವು ನಾವೇ ಬಡದಾಡಿಕೊಳ್ಳುವುದಲ್ಲ. ಇದು ಹೆಚ್ಚು ಶಕ್ತಿಯನ್ನು ನೀಡುವುದಿಲ್ಲ. ಅದಕ್ಕಾಗಿ ಎಲ್ಲವನ್ನೂ ಮರೆತು ಒಟ್ಟಾಗಿ ಹೋಗಬೇಕು. ಅಧಿವೇಶನವನ್ನು ಯಾವುದೇ ಗೊಂದಲವಿಲ್ಲದೆ ನಾವೆಲ್ಲ ಒಟ್ಟಾಗಿ ಎದುರಿಸುತ್ತೇವೆ. ಸರ್ಕಾರದ ಹಗರಣಗಳನ್ನು ಬಯಲು ಮಾಡಿ ರಾಜ್ಯದ ಜನರಿಗೆ ನ್ಯಾಯ ಕೊಡಿಸುತ್ತೇವೆ. ಈಗಾಗಲೇ ಇ.ಡಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದೆ. ಇವೆಲ್ಲವೂ ಮುಂಬರುವ ದಿನಗಳಲ್ಲಿ ಚರ್ಚೆ ಆಗಲಿದೆ ಎಂದು ಹೇಳಿದರು.
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…
ಪತಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪತ್ನಿ ಹಾವೇರಿ: ಪತಿಗೆ ಬೇರೆ…
ಬಡ್ಡಿ ದಂಧೆಕೋರರ ಕಿರುಕುಳ : ಸೆಲ್ಫಿ ವಿಡಿಯೋ ಮಾಡಿ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಗದಗ: ಬಡ್ಡಿ ದಂಧೆಕೋರರ ಕಿರುಕುಳಕ್ಕೆ…
ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರಕ್ಕೆ ಆಕ್ಷೇಪ: ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ ಶೋಭಾ ಕರಂದ್ಲಾಜೆ ಪತ್ರ ಬೆಂಗಳೂರು: ಕರ್ನಾಟಕ…
ಬೆಂಗಳೂರು: ಫುಟ್ಪಾತ್ ತೆರವು ಕಾರ್ಯಾಚರಣೆ ನಿಲ್ಲಲ್ಲ : ಸಚಿವ ಕೃಷ್ಣ ಬೈರೇಗೌಡ ಖಡಕ್ ಸೂಚನೆ ಬೆಂಗಳೂರು: ಬೀದಿಬದಿ ವ್ಯಾಪಾರಿಗಳಿಗೆ ಬೆಂಗಳೂರು…