ಬೆಂಗಳೂರು: ಬಿಜೆಪಿ ತನ್ನ ದುರುದ್ದೇಶಕ್ಕಾಗಿ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಈ ರೀತಿ ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಮಾತ್ರಕ್ಕೆ ಪಕ್ಷವನ್ನು ಮುಗಿಸಬಹುದೆಂದು ಭಾವಿಸಿದ್ದರೆ, ಅದು ಅವರ ತಪ್ಪು ಕಲ್ಪನೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಷಡ್ಯಂತ್ರದ ಮೂಲಕ ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ಈ ಮೂಲಕ ಬಿಜೆಪಿ ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದೆ. ಬಿಜೆಪಿಯ ಇಂತಹ ಕುತಂತ್ರಕ್ಕೆ ಯಾವ ಕಾಂಗ್ರೆಸ್ ನಾಯಕರೂ ಎದೆಗುಂದುವುದಿಲ್ಲ ಎಂದಿದ್ದಾರೆ.
ಜಾರಿ ನಿರ್ದೇಶನಾಲಯದಿಂದ ನೀಡಲಾಗಿರುವ ಎಲ್ಲಾ ಸಮನ್ಸ್ ಹಾಗೂ ನೋಟೀಸ್ ಗಳಿಗೂ ಸೂಕ್ತವಾಗಿ ಸ್ಪಂದಿಸಿರುವ ಶಿವಕುಮಾರ್ ಅವರನ್ನು ಉದ್ದೇಶ ಪೂರ್ವಕವಾಗಿ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಸುಳ್ಳು ಕಾರಣ ನೀಡಿ ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಲ್ಲಿಕಾರ್ಜುನ ಖರ್ಗೆ, ಈ ಹಿಂದೆ ಡಿಕೆಶಿ ಗುಜರಾತ್ ಶಾಸಕರಿಗೆ ರಕ್ಷಣೆ ನೀಡಿದ್ದಕ್ಕಾಗಿಯೇ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…