Featured

ಬಿಜೆಪಿಯ ದೊಡ್ಡ ಆಸ್ತಿ ಅನಂತ ಕುಮಾರ್ ; ಅಂತಿಮ ದರ್ಶನಕ್ಕೆ ಬೆಂಗಳೂರಿನತ್ತ ಪ್ರಧಾನಿ ಮೋದಿ ಆಗಮನ ಸಾಧ್ಯತೆ

ನವದೆಹಲಿ: ಬಹು ಅಂಗಾಂಗ ವೈಫಲ್ಯದಿಂದಾಗಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ವಿಧಿವಶರಾಗಿದ್ದು, ಈ ಹಿನ್ನಲೆಯಲ್ಲಿ ಅಂತಿಮ ದರ್ಶನ ಪಡೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ..

ನನ್ನ ಸಹೋದ್ಯೋಗಿ ಮತ್ತು ಸ್ನೇಹಿತ ಶ್ರೀ ಅನಂತ್ ಕುಮಾರ್ ಜಿ ಅಗಲಿಕೆಯಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಅವರು ಚಿಕ್ಕ ವಯಸ್ಸಿನಲ್ಲೇ ರಾಜಕೀಯ ಜೀವನವನ್ನು ಪ್ರವೇಶಿಸಿದ್ದರು. ಅನಂತ ಕುಮಾರ್ ಅವರು ಶ್ರದ್ಧೆ ಮತ್ತು ಸಹಾನುಭೂತಿಯಿಂದ ಸಮಾಜಕ್ಕೆ ಸೇವೆ ಸಲ್ಲಿಸಿದ್ದಾರೆ ಎಂದು ಬೇಸರದಿಂದ  ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ..“ಅನಂತ ಕುಮಾರ್ ಜೀ ಅವರು ಒಬ್ಬ ಸಮರ್ಥ ಆಡಳಿತಾಧಿಕಾರಿಯಾಗಿದ್ದು, ಅನೇಕ ಸಚಿವ ಖಾತೆಗಳನ್ನು ನಿರ್ವಹಿಸಿದ್ದರು. ಬಿಜೆಪಿ ಸಂಘಟನೆಗೆ ದೊಡ್ಡ ಆಸ್ತಿಯಾಗಿದ್ದು, ಅವರು ಕರ್ನಾಟಕದಲ್ಲಿ ವಿಶೇಷವಾಗಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪಕ್ಷವನ್ನು ಬಲಪಡಿಸಲು ಕಠಿಣ ಶ್ರಮ ಪಟ್ಟಿದ್ದರು.” ಎಂದು ಅವರ ಬಗ್ಗೆ ಹೇಳಿದ್ದಾರೆ.

ಇಂದು ಬೆಳಿಗ್ಗೆ 10.30ರ ಸುಮಾರಿಗೆ ವಿಶೇಷ ವಿಮಾನದ ಮೂಲಕ ಪ್ರಧಾನಿ ಮೋದಿಯವರು ಬೆಂಗಳೂರಿಗೆ ಆಗಮಿಸಲಿದ್ದು, ಅಂತಿಮ ದರ್ಶನ ಪಡೆಯಲಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಆದರೆ, ಈ ಕುರಿತು ಪ್ರಧಾನಿಮಂತ್ರಿಗಳ ಕಾರ್ಯಾಲಯ ಅಧಿಕೃತ ಮಾಹಿತಿಗಳನ್ನು ಘೋಷಣೆ ಮಾಡಿಲ್ಲ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

13 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

15 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

16 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

16 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

16 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

16 hours ago