ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಅಧಿಕಾರ ಸ್ವೀಕರಿಸಿದ್ದಾರೆ.
ಇಂದು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ನಳಿನ್ ಕುಮಾರ್ ಕಟೀಲ್ ಅವರಿಗೆ ಬಿಜೆಪಿ ಪಕ್ಷದ ಧ್ವಜ ನೀಡಿ ಅಧಿಕಾರ ಹಸ್ತಾಂತರಿಸಿದರು.
ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ವೀರಗಾಸೆ, ಡೊಳ್ಳು ಕುಣಿತದೊಂದಿಗೆ ನಳಿನ್ ಕುಮಾರ್ ಅವರನ್ನು ಸ್ವಾಗತಿಸಲಾಯಿತು.
ಪದಗ್ರಹಣಕ್ಕೂ ಮುನ್ನ ಇಂದು ಬೆಳಗ್ಗೆ 9.30 ಕ್ಕೆ ಕಾಡು ಮಲ್ಲೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಳಿನ್ ಕುಮಾರ್ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಸಭೆಯಲ್ಲಿ ನೂತನ ಸಚಿವರಾದ ಕೆ.ಎಸ್. ಈಶ್ವರಪ್ಪ, ಬಿ.ಶ್ರೀರಾಮುಲು, ಸಂಸದೆ ಶೋಭ ಕರಂದ್ಲಾಜೆ, ಸಿ.ಟಿ.ರವಿ, ಆರ್. ಅಶೋಕ್ ಸೇರಿದಂತೆ ಬಿಜೆಪಿಯ ನೂತನ ಸಚಿವರು, ಶಾಸಕರು ಭಾಗಿಯಾಗಿದ್ದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…