Featured

ಬಿಜೆಪಿಯ ಬಿ.ವೈ.ರಾಘವೇಂದ್ರ ಒರಿಜಿನಲ್​ ಅಭ್ಯರ್ಥಿ ; ಮಧು ಬಂಗಾರಪ್ಪ ಡೂಪ್ಲಿಕೇಟ್​ ಅಭ್ಯರ್ಥಿ : ಸೋದರನ ವಿರುದ್ಧ ಕುಮಾರ್ ಬಂಗಾರಪ್ಪ – Vishwanews24

ಶಿವಮೊಗ್ಗ: ಲೋಕಸಭಾ ಚುನಾವಣೆಯ ಈ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಒರಿಜಿನಲ್​ ಅಭ್ಯರ್ಥಿ. ಮಧು ಬಂಗಾರಪ್ಪ ಡೂಪ್ಲಿಕೇಟ್​ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೋದರನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮಧು ಬಂಗಾರಪ್ಪ ಸ್ವಂತ ಅಣ್ಣನನ್ನೇ ಮಾತನಾಡಿಸುವುದಿಲ್ಲ. ಬದಲಿಗೆ ಡಿ.ಕೆ.ಶಿವಕುಮಾರ್​, ಎಚ್​.ಡಿ.ಕುಮಾರಸ್ವಾಮಿ ಅವರಂಥ ಡೂಪ್ಲಿಕೇಟ್​ಗಳನ್ನು ಅಣ್ಣ ಎನ್ನುತ್ತಿದ್ದಾರೆ. ಮಧು ಬಂಗಾರಪ್ಪ ಇನ್ನೂ ಪ್ಯಾಕೇಜ್​ ಟೂರ್​ನಲ್ಲಿದ್ದಾರೆ. ಅವರು ಅಲ್ಲಿಂದ ಬರುವುದೇ ಬೇಡ. ನಾವು ಅವರನ್ನು ಸೋಲಿಸುವುದು ಗ್ಯಾರಂಟಿ ಎಂದರು.

ಕಾಗೋಡು ತಿಮ್ಮಪ್ಪನವರಿಂದ ಕೆಲಸ ಕಲಿತಿದ್ದೇನೆ. ಆದರೆ, ಈಗ ಅವರು ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​ ಮುಗಿಸಿ ದೇವೇಗೌಡರ ಪಾದಕ್ಕೆ ಅರ್ಪಿಸಿದ್ದಾರೆ. ಇಂಥ ರಾಜಕಾರಣಿಗಳು ಮುಂದಿನ ಪೀಳಿಗೆಗೆ ಹೇಗೆ ಆದರ್ಶವಾಗುತ್ತಾರೆ ಎಂದು ಪ್ರಶ್ನಿಸಿದರು.

ನಿಖಿಲ್​ ಎಲ್ಲಿದಿಯಪ್ಪಾ ಎಂದು ಆಡಿಯೋ ರಿಲೀಸ್​ ಕಾರ್ಯಕ್ರಮದಲ್ಲಿ ಬೂಟಾಟಿಕೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಪರಿಸ್ಥಿತಿ ಈಗ ನಿಜಕ್ಕೂ ಹಾಗೇ ಆಗಿದೆ. ಮಂಡ್ಯಕ್ಕೆ ದರ್ಶನ್​, ಯಶ್​ ಪ್ರಚಾರಕ್ಕೆ ಹೋದರೆ ಸಾಕು, ಕುಮಾರಸ್ವಾಮಿಯವರಿಗೆ ನಿಖಿಲ್​ ಎಲ್ಲಿದ್ದಾರೆ ಎಂಬುದೇ ಮರೆತು ಹೋಗುತ್ತದೆ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

14 minutes ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

4 hours ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

8 hours ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

9 hours ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

9 hours ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

9 hours ago