Featured

ಬಿಜೆಪಿಯ ಬಿ.ವೈ.ರಾಘವೇಂದ್ರ ಒರಿಜಿನಲ್​ ಅಭ್ಯರ್ಥಿ ; ಮಧು ಬಂಗಾರಪ್ಪ ಡೂಪ್ಲಿಕೇಟ್​ ಅಭ್ಯರ್ಥಿ : ಸೋದರನ ವಿರುದ್ಧ ಕುಮಾರ್ ಬಂಗಾರಪ್ಪ – Vishwanews24

ಶಿವಮೊಗ್ಗ: ಲೋಕಸಭಾ ಚುನಾವಣೆಯ ಈ ಕ್ಷೇತ್ರದಲ್ಲಿ ಬಿಜೆಪಿಯ ಬಿ.ವೈ.ರಾಘವೇಂದ್ರ ಒರಿಜಿನಲ್​ ಅಭ್ಯರ್ಥಿ. ಮಧು ಬಂಗಾರಪ್ಪ ಡೂಪ್ಲಿಕೇಟ್​ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ ಸೋದರನ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಮಧು ಬಂಗಾರಪ್ಪ ಸ್ವಂತ ಅಣ್ಣನನ್ನೇ ಮಾತನಾಡಿಸುವುದಿಲ್ಲ. ಬದಲಿಗೆ ಡಿ.ಕೆ.ಶಿವಕುಮಾರ್​, ಎಚ್​.ಡಿ.ಕುಮಾರಸ್ವಾಮಿ ಅವರಂಥ ಡೂಪ್ಲಿಕೇಟ್​ಗಳನ್ನು ಅಣ್ಣ ಎನ್ನುತ್ತಿದ್ದಾರೆ. ಮಧು ಬಂಗಾರಪ್ಪ ಇನ್ನೂ ಪ್ಯಾಕೇಜ್​ ಟೂರ್​ನಲ್ಲಿದ್ದಾರೆ. ಅವರು ಅಲ್ಲಿಂದ ಬರುವುದೇ ಬೇಡ. ನಾವು ಅವರನ್ನು ಸೋಲಿಸುವುದು ಗ್ಯಾರಂಟಿ ಎಂದರು.

ಕಾಗೋಡು ತಿಮ್ಮಪ್ಪನವರಿಂದ ಕೆಲಸ ಕಲಿತಿದ್ದೇನೆ. ಆದರೆ, ಈಗ ಅವರು ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್​ ಮುಗಿಸಿ ದೇವೇಗೌಡರ ಪಾದಕ್ಕೆ ಅರ್ಪಿಸಿದ್ದಾರೆ. ಇಂಥ ರಾಜಕಾರಣಿಗಳು ಮುಂದಿನ ಪೀಳಿಗೆಗೆ ಹೇಗೆ ಆದರ್ಶವಾಗುತ್ತಾರೆ ಎಂದು ಪ್ರಶ್ನಿಸಿದರು.

ನಿಖಿಲ್​ ಎಲ್ಲಿದಿಯಪ್ಪಾ ಎಂದು ಆಡಿಯೋ ರಿಲೀಸ್​ ಕಾರ್ಯಕ್ರಮದಲ್ಲಿ ಬೂಟಾಟಿಕೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಪರಿಸ್ಥಿತಿ ಈಗ ನಿಜಕ್ಕೂ ಹಾಗೇ ಆಗಿದೆ. ಮಂಡ್ಯಕ್ಕೆ ದರ್ಶನ್​, ಯಶ್​ ಪ್ರಚಾರಕ್ಕೆ ಹೋದರೆ ಸಾಕು, ಕುಮಾರಸ್ವಾಮಿಯವರಿಗೆ ನಿಖಿಲ್​ ಎಲ್ಲಿದ್ದಾರೆ ಎಂಬುದೇ ಮರೆತು ಹೋಗುತ್ತದೆ ಎಂದು ವ್ಯಂಗ್ಯವಾಡಿದರು.

Vishwa News 24

Recent Posts

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ – vishwanews24

ಕುಂದಾಪುರ: ನಿಂತ ಲಾರಿಗಳಿಗೆ ಬಸ್ ಢಿಕ್ಕಿ: ಎರಡು ಸಾವು, ಹಲವರಿಗೆ ಗಾಯ ಕುಂದಾಪುರ: ಮರವಂತೆ ಸಮುದ್ರ ಕಿನಾರೆಯ ಎದುರಿನ‌ ರಾಷ್ಟ್ರೀಯ…

12 hours ago

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ – vishwanews24

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌ ನವದೆಹಲಿ : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು…

12 hours ago

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – vishwanews24

ದ. ಕ, ಉಡುಪಿ ಸೇರಿದಂತೆ  5 ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ; 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ …

13 hours ago

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ – vishwanews24

ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…

16 hours ago

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು – vishwanews24

ಮಂಗಳೂರು: ಸ್ಕೂಟರ್‌ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…

16 hours ago

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ – vishwanews24

ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…

16 hours ago