ನವದೆಹಲಿ: ಕರ್ನಾಟಕದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಸಿಂಗಂ ಖ್ಯಾತಿಯ ಅಣ್ಣಾಮಲೈ ಇಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ ತಮ್ಮ ಜೀವನದ 2ನೇ ಇನ್ನಿಂಗ್ಸ್ ಆರಂಭಿಸಿದ್ದಾರೆ.
ನವದೆಹಲಿಯ ಬಿಜೆಪಿ ಕಚೇರಿಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುರಳೀಧರ ರಾವ್ , ಬಿಜೆಪಿ ಶಾಲು ಹೊದಿಸಿ, ಗಣ್ಯರ ಸಮ್ಮುಖದಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ಪಡೆಯುವುದರೊಂದಿಗೆ ಬಿಜೆಪಿಗೆ ಅಣ್ಣಾಮಲೈ ಸೇರ್ಪಡೆಯಾದರು.
ಇನ್ನು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡು ಮಾತನಾಡಿದ ಅಣ್ಣಾಮಲೈ, ಬಿಜೆಪಿಯ ರಾಷ್ಟ್ರವಾದ ಹಾಗೂ ಅಭಿವೃದ್ಧಿ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದಾಗಿ ಸ್ಷಷ್ಟಪಡಿಸಿದರು.
ಪ್ರಧಾನಿ ಮೋದಿ ಅವರ ಅಭಿವೃದ್ಧಿ ಪರ ರಾಜಕಾರಣ ಹಾಗೂ ದೇಶವನ್ನು ಅವರು ಮುನ್ನಡೆಸುತ್ತಿರುವ ರೀತಿ ನಿಜಕ್ಕೂ ಅನನ್ಯ ಎಂದಿರುವ ಅಣ್ಣಾಮಲೈ, ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶ 21ನೇ ಶತಮಾನದ ಪ್ರಶ್ನಾತೀತ ನಾಯಕನಾಗಿ ಹೊರಹೊಮ್ಮುತ್ತಿದೆ ಎಂದು ಹೇಳಿದರು.
ತಮಿಳುನಾಡಿಗೆ ಬಿಜೆಪಿಯ ಅವಶ್ಯಕತೆಯಿದ್ದು, ಅದರಂತೆ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಈ ವೇಳೆ ಅಣ್ಣಾಮಲೈ ಭರವಸೆ ನೀಡಿದರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…