Featured

ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ , ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ : ಡಿಕೆ ಶಿವಕುಮಾರ್ -Vishwanews24

  • ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ , ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ ..

  • ಪ್ರಿಯಾಂಕಾ ಗಾಂಧಿಯವರೇ ಇಡೀ ದೇಶದ ಜನ ನಿಮ್ಮ ಹಿಂದೆ ಇದ್ದಾರೆ. ನೀವು ಮುನ್ನುಗ್ಗಿ, ನಿಮ್ಮ ಬೆನ್ನ ಹಿಂದೆ ನಾವು ಇದ್ದೇವೆ..

  • : ಡಿಕೆ ಶಿವಕುಮಾರ್ -Vishwanews24

ಬೆಂಗಳೂರು: ‘ಉತ್ತರ ಪ್ರದೇಶದಲ್ಲಿ ನಡೆದ ಘಟನೆಗೆ ನೈತಿಕ ಹೊಣೆ ಹೊತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್‌ ಮಿಶ್ರಾ ತಕ್ಷಣ ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ‘ಅನ್ನದಾತ ತನ್ನ ರಕ್ಷಣೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಿದ್ದಾನೆ. ಕೇಂದ್ರ ಸಚಿವ ಮಿಶ್ರಾ ಅವರ ಬೆಂಗಾವಲು ಕಾರು ಹರಿಸಿ ನಾಲ್ವರನ್ನು ರೈತರನ್ನು ಕೊಲೆ ಮಾಡಲಾಗಿದೆ. ಈ ದೇಶ ಯಾವ ಕಡೆ ಹೋಗುತ್ತಿದೆ ಎಂಬ ಆತಂಕ ಆಗುತ್ತಿದೆ. ತಕ್ಷಣ ಅವರಿಬ್ಬರೂ ರಾಜೀನಾಮೆ ಕೊಟ್ಟು, ಕ್ಷಮೆ ಕೇಳಬೇಕಿತ್ತು’ ಎಂದರು.

‘ಇದು ಕೇವಲ ನಾಲ್ವರು ರೈತರ ಕೊಲೆ ಅಲ್ಲ. ಇಡೀ ದೇಶದ ರೈತರ ಕೊಲೆ. ಪ್ರಜಾಪ್ರಭುತ್ವದ ಕೊಲೆ. ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಭಾನುವಾರ ಮಧ್ಯರಾತ್ರಿ ಆ ಸ್ಥಳಕ್ಕೆ ಹೋಗುವಾಗ ಪೊಲೀಸರು ಅವರನ್ನು ಎಳೆದಾಡಿ, ತಡೆದಿದ್ದಾರೆ. ಯಾವ ದೇಶದಲ್ಲಿ ನಾವಿದ್ದೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಇಡೀ ದೇಶದಲ್ಲಿ ರೈತ ಸಿಡಿದೆದ್ದಿದ್ದಾನೆ. ಇಂಥ ರೈತರ ಸಾವಾದಾಗ ಅಲ್ಲಿಗೆ ಹೋಗಲು ಮುಂದಾದ ಪ್ರಿಯಾಂಕಾ ಗಾಂಧಿಯವರನ್ನು ಪೊಲೀಸರು ಎಳೆದಾಡಿದ್ದಾರೆ. ಇಡೀ ದೇಶ ಪ್ರಿಯಾಂಕಾ ಅವರ ಗಾಂಧಿ ಬೆನ್ನ ಹಿಂದಿದೆ. ಸತ್ತ ರೈತರ ಕುಟುಂಬಕ್ಕೆ ಸಾಂತ್ವನ ಹೇಳಲು ಪ್ರಿಯಾಂಕಾ ಮುಂದಾಗಿದ್ದರು. ಸಾಂತ್ವನ ಹೇಳುವುದು ನಮ್ಮ ಸಂಸ್ಕೃತಿ. ಎಳೆದಾಡಿ ತಡೆಯುವುದು ಬಿಜೆಪಿ ಸಂಸ್ಕೃತಿ. ಸರ್ವಾಧಿಕಾರಿ ಆಡಳಿತ ದೇಶದಲ್ಲಿ ನಡೆಯುತ್ತಿದೆ. ಹಿಟ್ಲರ್ ಮಾದರಿಯ ಆಡಳಿತ ನಡೆಯುತ್ತಿದೆ. ರಾಮ ರಾಜ್ಯ ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದವರು ರಾವಣ ರಾಜ್ಯ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಕೋವಿಡ್‌ನಿಂದ ಮೃತಪಟ್ಟವರಿಗೆ ಪರಿಹಾರ ನೀಡಿಕೆಗೆ ಯಾವ ರಾಜ್ಯವೂ ತಡೆ ಒಡ್ಡಬಾರದು : ಸುಪ್ರೀಂ – Vishwanews24

‘ದೇಶದ ಅನ್ನದಾತನ ಶಾಂತಿಯುತ ಪ್ರತಿಭಟನೆ ಸಹಿಸಲಿಲ್ಲ. ಅನ್ನದಾತರನ್ನು ಒಬ್ಬ ಕೇಂದ್ರ ಸಚಿವನೂ ಭೇಟಿ ಮಾಡಲಿಲ್ಲ. ಬಿಜೆಪಿ ಸರ್ಕಾರ ರೈತರ ಮಾತುಕತೆಗೂ ಕರೆಯದೇ ಇಂಥ ಕೃತ್ಯ ನಡೆಸಿರುವುದು ಖಂಡನೀಯ. ಆಡಳಿತದಲ್ಲಿ ಬಿಜೆಪಿಯವರು ಬ್ರಿಟಿಷರಿಗಿಂತ ಮೇಲು. ಬ್ರಿಟಿಷರಾದರೂ ಕಡೆಗೆ ತಲೆಬಾಗಿ ಓಡಿ ಹೋದರು. ಆದರೆ, ಈ ಬಿಜೆಪಿಯ ವಿರುದ್ಧ ಜನರೇ ದಂಗೆ ಏಳಬೇಕಾಗಿದೆ. ಪ್ರಿಯಾಂಕಾ ಗಾಂಧಿಯವರೇ ಇಡೀ ದೇಶದ ಜನ ನಿಮ್ಮ ಹಿಂದೆ ಇದ್ದಾರೆ. ನೀವು ಮುನ್ನುಗ್ಗಿ, ನಿಮ್ಮ ಬೆನ್ನ ಹಿಂದೆ ನಾವು ಇದ್ದೇವೆ. ದೇಶದ ಜನರೇ ಬಿಜೆಪಿಗೆ ಪಾಠ ಕಲಿಸುತ್ತಾರೆ’ ಎಂದರು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಸಲೀಂ ಅಹ್ಮದ್, ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮೀಗಾ ಇದ್ದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

13 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

13 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

14 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

14 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago