Featured

ಬಿಜೆಪಿಯ ಸರ್ವನಾಶಕ್ಕೆ ಬಿಜೆಪಿಯೇ ಕಾರಣ: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ:  ನಗರದ ಎಸ್​ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ವಾಮ ಮಾರ್ಗದ ಮೂಲಕ ಬಿಜೆಪಿ ಸರ್ಕಾರವನ್ನು ರಚಿಸಲು ಹೊರಟಿದೆ. ಇದರಿಂದ ಬಿಜೆಪಿಯವರು ಅವರ ನಾಶಕ್ಕೆ ಅವರೇ ಕಾರಣಕರ್ತರಾಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಗರು ಈ ಹಿಂದೆ ಆಪರೇಷನ್ ಕಮಲ ಮಾಡೋಕೆ ಹೋಗಿ ಹೀನಾಯವಾಗಿ ಸೋತಿದ್ದರು. ಸದ್ಯ ಈಗ ಮತ್ತೆ ಆಪರೇಷನ್ ಕಮಲ ಮಾಡೋಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲೂ ಬಿಜೆಪಿ ನಾಶವಾಗುತ್ತೆ ಎಂದು ಭವಿಷ್ಯ ನುಡಿದರು.

ಇನ್ನು ಮಹಾರಾಷ್ಟ್ರ ಸಿಎಂ ಫಡ್ನವೀಸ್​ ಅವರು ಶಾಸಕ ಸತೀಶ್ ಜಾರಕಿಹೊಳಿ ಭೇಟಿ ಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಶುಗರ್ ಫ್ಯಾಕ್ಟರಿ ವಿಚಾರಕ್ಕೆ ಮಾತನಾಡಲು ಭೇಟಿಯಾಗಿದ್ದಾರೆ ಹೊರತೂ ರಾಜಕೀಯ ಬೆಳವಣಿಗೆಗೂ ಭೇಟಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷವನ್ನು ಯಾವುದೇ ವ್ಯಕ್ತಿಗಳು ಒಡೆಯಲಿಕ್ಕೆ ಸಾಧ್ಯವಿಲ್ಲ ಎಂದು ಮೊಯ್ಲಿ ತಿಳಿಸಿದ್ದಾರೆ.

ಸತೀಶ್ ಜಾರಕಿಹೊಳಿ ರಾಜೀನಾಮೆ ಕೊಡೋ ವಿಚಾರ ಕೇವಲ ಉಹಾಪೋಹ ಅಷ್ಟೇ. ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನ ಹಿರಿಯ ನಾಯಕ, ಅವರಿಗೆ ಲೇವಾದೇವಿ ವಿಷಯದಲ್ಲಿ ಅನವಶ್ಯಕವಾಗಿ ಕಿರುಕುಳ ನೀಡುಲಾಗುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಸಿಬಿಐ ಹಾಗೂ ಐಟಿಯನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ಮೊಯ್ಲಿ ಆರೋಪಿಸಿದ್ದಾರೆ.

ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ : ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಅಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀರಪ್ಪ ಮೊಯ್ಲಿ ಶಾಪ ಹಾಕಿದ್ದಾರೆ.

ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದ್ರೆ ಬಿಜೆಪಿ ಸರ್ವನಾಶವಾಗುತ್ತದೆ. ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ್ರೆ ರಾಜ್ಯ ಹಾಗೂ ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತದೆ ಅಂತ ಹೇಳಿದ್ದಾರೆ.

 

ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ. ಯಾಕಂದ್ರೆ ಅಪರೇಷನ್ ಕಮಲ ಮಾಡಿ ಬಿಜೆಪಿ ಈಗಾಗಲೇ ವಿಫಲವಾಗಿದೆ. ಹಿಂದೆ ಅಪರೇಷನ್ ಕಮಲ ಮಾಡಿ ಬಿಜೆಪಿ ಪಕ್ಷ ಒಡೆದು ಹೋಯಿತು. ತದನಂತರ ಹೀನಾಯವಾಗಿ ಬಿಜೆಪಿಯವರು ಸೋತರು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆ ವ್ಯಕ್ತಿ ಹಾಗೂ ಪಕ್ಷಕ್ಕೆ ನಷ್ಟವಾಗುತ್ತದೆ ಅಂದ್ರು.

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

5 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

5 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago