ಚಿಕ್ಕಬಳ್ಳಾಪುರ: ನಗರದ ಎಸ್ಜೆಸಿಐಟಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ, ವಾಮ ಮಾರ್ಗದ ಮೂಲಕ ಬಿಜೆಪಿ ಸರ್ಕಾರವನ್ನು ರಚಿಸಲು ಹೊರಟಿದೆ. ಇದರಿಂದ ಬಿಜೆಪಿಯವರು ಅವರ ನಾಶಕ್ಕೆ ಅವರೇ ಕಾರಣಕರ್ತರಾಗುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಬಿಜೆಪಿಗರು ಈ ಹಿಂದೆ ಆಪರೇಷನ್ ಕಮಲ ಮಾಡೋಕೆ ಹೋಗಿ ಹೀನಾಯವಾಗಿ ಸೋತಿದ್ದರು. ಸದ್ಯ ಈಗ ಮತ್ತೆ ಆಪರೇಷನ್ ಕಮಲ ಮಾಡೋಕೆ ಮುಂದಾಗಿದ್ದಾರೆ. ಇದರಿಂದ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲೂ ಬಿಜೆಪಿ ನಾಶವಾಗುತ್ತೆ ಎಂದು ಭವಿಷ್ಯ ನುಡಿದರು.
ಇನ್ನು ಮಹಾರಾಷ್ಟ್ರ ಸಿಎಂ ಫಡ್ನವೀಸ್ ಅವರು ಶಾಸಕ ಸತೀಶ್ ಜಾರಕಿಹೊಳಿ ಭೇಟಿ ಯಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ ಶುಗರ್ ಫ್ಯಾಕ್ಟರಿ ವಿಚಾರಕ್ಕೆ ಮಾತನಾಡಲು ಭೇಟಿಯಾಗಿದ್ದಾರೆ ಹೊರತೂ ರಾಜಕೀಯ ಬೆಳವಣಿಗೆಗೂ ಭೇಟಿಗೂ ಸಂಬಂಧವಿಲ್ಲ. ಕಾಂಗ್ರೆಸ್ ಪಕ್ಷವನ್ನು ಯಾವುದೇ ವ್ಯಕ್ತಿಗಳು ಒಡೆಯಲಿಕ್ಕೆ ಸಾಧ್ಯವಿಲ್ಲ ಎಂದು ಮೊಯ್ಲಿ ತಿಳಿಸಿದ್ದಾರೆ.
ಸತೀಶ್ ಜಾರಕಿಹೊಳಿ ರಾಜೀನಾಮೆ ಕೊಡೋ ವಿಚಾರ ಕೇವಲ ಉಹಾಪೋಹ ಅಷ್ಟೇ. ಸಚಿವ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ನ ಹಿರಿಯ ನಾಯಕ, ಅವರಿಗೆ ಲೇವಾದೇವಿ ವಿಷಯದಲ್ಲಿ ಅನವಶ್ಯಕವಾಗಿ ಕಿರುಕುಳ ನೀಡುಲಾಗುತ್ತಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಸಿಬಿಐ ಹಾಗೂ ಐಟಿಯನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ಮೊಯ್ಲಿ ಆರೋಪಿಸಿದ್ದಾರೆ.
ರಾಜ್ಯ, ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತೆ : ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದರೆ ಬಿಜೆಪಿ ಸರ್ವನಾಶವಾಗುತ್ತದೆ ಅಂತ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ವೀರಪ್ಪ ಮೊಯ್ಲಿ ಶಾಪ ಹಾಕಿದ್ದಾರೆ.
ಸಮ್ಮಿಶ್ರ ಸರ್ಕಾರ ಉರುಳಿಸಲು ಯತ್ನಿಸಿದ್ರೆ ಬಿಜೆಪಿ ಸರ್ವನಾಶವಾಗುತ್ತದೆ. ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದ್ರೆ ರಾಜ್ಯ ಹಾಗೂ ದೇಶದಲ್ಲೇ ಬಿಜೆಪಿ ಸರ್ವ ನಾಶವಾಗುತ್ತದೆ ಅಂತ ಹೇಳಿದ್ದಾರೆ.
ಸಮ್ಮಿಶ್ರ ಸರ್ಕಾರ ಬೀಳಿಸುವ ಕೆಲಸಕ್ಕೆ ಬಿಜೆಪಿ ಕೈ ಹಾಕಲ್ಲ ಅನ್ನೋ ವಿಶ್ವಾಸವಿದೆ. ಯಾಕಂದ್ರೆ ಅಪರೇಷನ್ ಕಮಲ ಮಾಡಿ ಬಿಜೆಪಿ ಈಗಾಗಲೇ ವಿಫಲವಾಗಿದೆ. ಹಿಂದೆ ಅಪರೇಷನ್ ಕಮಲ ಮಾಡಿ ಬಿಜೆಪಿ ಪಕ್ಷ ಒಡೆದು ಹೋಯಿತು. ತದನಂತರ ಹೀನಾಯವಾಗಿ ಬಿಜೆಪಿಯವರು ಸೋತರು. ವಾಮಮಾರ್ಗದಿಂದ ಅಧಿಕಾರ ಹಿಡಿದ್ರೆ ಆ ವ್ಯಕ್ತಿ ಹಾಗೂ ಪಕ್ಷಕ್ಕೆ ನಷ್ಟವಾಗುತ್ತದೆ ಅಂದ್ರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…