ಬೆಂಗಳೂರು: 20 ಹಾಲಿ ಬಿಜೆಪಿ ಶಾಸಕರಿಗೆ ಟಿಕೆಟ್ ಕೈ ತಪ್ಪುತ್ತಾ..?, ವರ್ಚಸ್ಸು, ವಯಸ್ಸು, ಆಡಳಿತ ವಿರೋಧಿ ಅಲೆಯೇ ಮಾನದಂಡ ಆಗುತ್ತಾ ಎಂಬ ಪ್ರಶ್ನೆಗಳು ಬಿಜೆಪಿಯಲ್ಲಿ ಬಿಸಿಬಿಸಿ ಚರ್ಚೆಗೆ ಗ್ರಾಸವಾಗಿದೆ.
16 ಜಿಲ್ಲೆಗಳಲ್ಲಿ ಬಿಜೆಪಿ ಹಾಲಿ ಶಾಸಕರಿಗೆ ಕೊಕ್ ಕೊಡುವ ಶಾರ್ಟ್ ಲಿಸ್ಟ್ ರೆಡಿ ಆಗ್ತಿದೆ ಎನ್ನಲಾಗಿದ್ದು, ಹೈಕಮಾಂಡ್ ಮುಂದಿರುವ ವರದಿ ಅಸಲಿಯತ್ತಿನ ಬಗ್ಗೆ ಕುತೂಹಲ ಮೂಡಿದೆ. ಚುನಾವಣೆಗೆ ಇನ್ನು ಮೂರೂವರೆ ತಿಂಗಳು ಬಾಕಿ ಇರುವಾಗಲೇ ಟಿಕೆಟ್ ಲೆಕ್ಕಚಾರ ಶುರುವಾಗಿದ್ದು, ಬಿಜೆಪಿ ಟಿಕೆಟ್ ನೀಡಿಕೆ ಮಾನದಂಡಗಳ ಬಗ್ಗೆ ಪಕ್ಷದ ವೇದಿಕೆಯಲ್ಲೇ ಚರ್ಚೆ ಆಗುತ್ತಿದೆ. ಗುಜರಾತ್ ಮಾಡೆಲ್, ಉತ್ತರ ಪ್ರದೇಶ ಮಾಡೆಲ್ಗಳ ಪ್ರಯೋಗದ ಬಗ್ಗೆ ಆತಂಕ ವ್ಯಕ್ತವಾಗ್ತಿದೆ. ಬರೋಬ್ಬರಿ 20ಕ್ಕೂ ಹೆಚ್ಚು ಶಾಸಕರಿಗೆ ಟಿಕೆಟ್ ಕೈ ತಪ್ಪು ಆತಂಕವಿದೆ ಎನ್ನಲಾಗಿದೆ.
ನಾಲ್ಕು ಜಿಲ್ಲೆಗಳಲ್ಲಿ ತಲಾ ಇಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆ ಚರ್ಚೆ ಆಗುತ್ತಿದ್ದರೆ, 12 ಜಿಲ್ಲೆಗಳಲ್ಲಿ ತಲಾ ಒಬ್ಬರು ಹಾಲಿ ಶಾಸಕರಿಗೆ ಕೊಕ್ ಕೊಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕ್ಷೇತ್ರಗಳಲ್ಲಿ ವೈಯುಕ್ತಿಕ ವರ್ಚಸ್ಸಿನ ಕುಸಿತ, ಆಡಳಿತ ವಿರೋಧಿ ಅಲೆಯ ಬಗ್ಗೆ ಹೈಕಮಾಂಡ್ ವರದಿ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈಗಾಗಲೇ 20ಕ್ಕೂ ಹೆಚ್ಚು ಕ್ಷೇತ್ರಗಳ ವರದಿಯನ್ನ ಪಡೆದಿರುವ ಬಿಜೆಪಿ ಹೈಕಮಾಂಡ್, ಏನ್ ಮಾಡುತ್ತೆ ಅನ್ನೋ ಆತಂಕ ಇದೆ. ಅಲ್ಲದೆ ವಯಸ್ಸಿನ ಕಾರಣದಿಂದಾಗಿ ಯಡಿಯೂರಪ್ಪ ಮಾಡೆಲ್ ಅನುಸರಿಸುವ ಬಗ್ಗೆಯೂ ಸುಳಿವು ಸಿಕ್ಕಿದೆ ಎನ್ನಲಾಗ್ತಿದೆ. ಒಟ್ಟಾರೆ ಮೂರು ಅಂಶಗಳ ಮಾನದಂಡಗಳನ್ನಿಟ್ಟುಕೊಂಡು ಕೆಲ ಹಾಲಿ ಶಾಸಕರಿಗೆ ಗೇಟ್ ಪಾಸ್ ಸಾಧ್ಯತೆ ಇದ್ದು, ಫೆಬ್ರವರಿ ಎರಡನೇ ವಾರದ ಬಳಿಕ ಬಿಜೆಪಿ ಹೈಕಮಾಂಡ್ ನಿರ್ಧಾರದ ಬಗ್ಗೆ ಸ್ಪಷ್ಟವಾದ ಸುಳಿವು ಸಿಗಲಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…